Advertisement

ಗ್ರಾಮ ಪಂಚಾಯತ್‌ ನೌಕರರ ಶವ ಸಂಸ್ಕಾರಕ್ಕೆ 10 ಸಾವಿರ ರೂ.

10:48 PM May 11, 2022 | Team Udayavani |

ಬೆಂಗಳೂರು: ಗ್ರಾಮ ಪಂಚಾಯತ್‌ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟರೆ ಅವರ ಶವ ಸಂಸ್ಕಾರಕ್ಕೆ 10 ಸಾವಿರ ರೂ. ಮಂಜೂರು ಮಾಡಲು ಸರಕಾರ ತೀರ್ಮಾನಿಸಿದೆ.

Advertisement

ಗ್ರಾ.ಪಂ. ನೌಕರರ ಬೇಡಿಕೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಹರ್ಷ ಕೊಲೆ ಪ್ರಕರಣ: ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ

ಪಂಚಾಯತ್‌ಗಳಲ್ಲಿ ಬಿಲ್‌ ಕಲೆಕ್ಟರ್‌, ಕ್ಲರ್ಕ್‌, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌, ವಾಟರ್‌ ಆಪರೇಟರ್‌, ಅಟೆಂಡೆಂಟ್‌ ಮತ್ತು ಕ್ಲೀನರ್‌ಗಳು ಕಾರ್ಯನಿರ್ವಹಿಸುತ್ತಿರುತ್ತಾರೆ. ಇವರು ಸೇವೆಯಲ್ಲಿರುವಾಗಲೇ ಮೃತಪಟ್ಟರೆ ಶವ ಸಂಸ್ಕಾರಕ್ಕೆ 10 ಸಾ.ರೂ. ಮಂಜೂರು ಮಾಡಬೇಕು. ಇದನ್ನು ಪಂಚಾಯತ್‌ಗಳು ಸ್ವಂತ ಸಂಪನ್ಮೂಲಗಳಿಂದ ಭರಿಸಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next