Advertisement

ಗ್ರಾ.ಪಂ.ಗಳಿಂದ ಗ್ರಾಮಸೇವೆ

12:38 AM Sep 24, 2021 | Team Udayavani |

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಸೇವೆಗಳನ್ನು ಗ್ರಾಮ ಪಂಚಾಯತ್‌ಗಳ ಮೂಲಕ ಜನರಿಗೆ ಒದಗಿಸುವುದಕ್ಕಾಗಿ ಹೊಸ ಯೋಜನೆ ಜಾರಿಗೊಳ್ಳಲಿದೆ. ಇದನ್ನು ಜ. 26ರಂದು ಪ್ರಾಯೋಗಿಕವಾಗಿ ಅನಾವರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

Advertisement

ಪಂ.ರಾಜ್‌ ಮತ್ತು ಗ್ರಾಮೀಣಾಭಿ ವೃದ್ಧಿ ಇಲಾಖೆಯ “ಅಮೃತ ಗ್ರಾ.ಪಂ. ಯೋಜನೆ’ಗೆ ವಿಧಾನಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಗಿರಿರಾಜ್‌ ಸಿಂಗ್‌ ಅವರೊಂದಿಗೆ ಚಾಲನೆ ನೀಡಿ ಸಿಎಂ ಮಾತನಾಡಿದರು.

ರಾಜ್ಯದ ಜನರು ಸರಕಾರದ ವಿವಿಧ ಯೋಜನೆಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಇದಕ್ಕಾಗಿ ಗ್ರಾ.ಪಂ. ಮೂಲಕ ಜನರಿಗೆ ಸರಕಾರದ ಅಗತ್ಯ ಸೇವೆಗಳನ್ನು ಆನ್‌ಲೈನ್‌ ಅಥವಾ ಆಫ್ಲೈನ್‌ ಮೂಲಕ ನೀಡಲು ಯೋಜನೆ ರೂಪಿಸು ತ್ತಿದ್ದೇವೆ. ಜ. 26ರಿಂದ 5 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಿದ್ದೇವೆ ಎಂದು ವಿವರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next