Advertisement

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

03:07 PM Jun 20, 2021 | Team Udayavani |

ಮಂಗಳೂರು : ಕೋವಿಡ್ ನಿಯಮ ಮೀರಿ ನಗರದ ಮಂಗಳಾದೇವಿ ದೇವಾಲಯದ ಆವರಣದಲ್ಲಿ ನಡೆಯುತ್ತಿದ್ದ ಅದ್ಧೂರಿ ಮದುವೆ ಸಮಾರಂಭಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಸದ್ಯ ನಿಯಮದ ಪ್ರಕಾರದ ಯಾವುದೇ ಹಾಲ್‌ನಲ್ಲಿ, ದೇವಸ್ಥಾನದಲ್ಲಿ ಮದುವೆ ನಡೆಸುವಂತಿಲ್ಲ. ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿ 4 ಜೋಡಿಯ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ದೇವಾಲಯದ ಹೊರಗೆ ನಿಂತಿದ್ದ 40 ಕ್ಕೂ ಹೆಚ್ಚು ಕಾರುಗಳು, ವಾದ್ಯ ವಾಲಗದ ಸದ್ದು ಕೇಳಿ ಯಾರೋ ಜಿಲ್ಲಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ಇದನ್ನೂ ಓದಿ: ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

ದೂರು ಬಂದ ಹಿನ್ನೆಲೆ ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ  ಕೈಗೊಳ್ಳಲು ಸೂಚಿಸಿದ್ದಾರೆ.

ಸ್ಥಳೀಯ ರಾಜಕೀಯ ನಾಯಕರೊಬ್ಬರ ಮಗಳ ಮದುವೆ ಸೇರಿದಂತೆ ಒಟ್ಟು ನಾಲ್ಕು ಮದುವೆ ಜೋಡಿಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next