Advertisement

ನೀಲೂರು ರೈಲ್ವೆ ಸೇತುವೆಗೆ ಅನುದಾನ

02:52 AM Jan 20, 2022 | Team Udayavani |

ಕಲಬುರಗಿ: ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಫ‌ಜಲಪುರ ತಾಲೂಕಿನ ನೀಲೂರು ಗ್ರಾಮದ ರೈಲ್ವೆ ಕೆಳಸೇತುವೆ ನಿರ್ಮಾಣ ಕಾರ್ಯವನ್ನು ರಾಜ್ಯದ ಮೂಲ ಸೌಕರ್ಯ ಇಲಾಖೆಯಿಂದಲೇ ನಿರ್ಮಿಸಲಾಗುವುದು ಎಂದು ವಸತಿ ಹಾಗೂ ಮೂಲ ಸೌಕರ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.

Advertisement

ಮಂಗಳವಾರ ವಿಧಾನಸೌಧದಲ್ಲಿ ಸಂಸದ ಡಾ| ಉಮೇಶ ಜಾಧವ ಸೇರಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಈ ವಿಷಯ ಪ್ರಕಟಿಸಿದರು. ನೀಲೂರು ಕೆಳಸೇತುವೆ ಕಾಮಗಾರಿ ವಿಸ್ತರಣೆ ಹಾಗೂ ಮೂಲ ಸೌಕರ್ಯಕ್ಕಾಗಿ ಗ್ರಾಮಸ್ಥರು ಹಾಗೂ ಆ ಭಾಗದ ಜನರು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಈಗ ಅವರ ಬೇಡಿಕೆ ಈಡೇರಲಿದೆ.

ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಕಾಮಗಾರಿಗೆ ಅಂದಾಜು ಪಟ್ಟಿ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಸೋಮಣ್ಣ, ಕಾಮಗಾರಿ ಪೂರ್ಣಕ್ಕೆ ಅನುದಾನ ನಿಗದಿ ಮಾಡುವಂತೆ ನಿರ್ದೇಶನ ನೀಡಿದರು. ಸಂಸದ ಡಾ| ಉಮೇಶ ಜಾಧವ ಮಾತನಾಡಿ, ನೀಲೂರ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಸಚಿವ ಸೋಮಣ್ಣ ಆಸಕ್ತಿ ವಹಿಸಿ ಅನುದಾನ ನೀಡುತ್ತಿರುವುದು ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ದಾವಣಗೆರೆ ಸಂಸದ ಸಿದ್ಧೇಶ್ವರ ಹಾಗೂ ಅಧಿಕಾರಿಗಳು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next