Advertisement

ಬಾಕಿ ಕಾಮಗಾರಿಗಾಗಿ ಅನುದಾನ: ಟೆಂಡರ್‌ ಪ್ರಕ್ರಿಯೆ ಪೂರ್ಣ

02:43 PM Sep 08, 2022 | Team Udayavani |

ಕುಂದಾಪುರ: ಮೂಡ್ಲ ಕಟ್ಟೆಯ ರೈಲು ನಿಲ್ದಾಣವನ್ನು ಸಂಪರ್ಕಿಸುವ ರಸ್ತೆಯ ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿಗಾಗಿ ಈಗಾಗಲೇ 30 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಈಗ ಟೆಂಡರ್‌ ಪ್ರಕ್ರಿಯೆಯೂ ಪೂರ್ಣ ಗೊಂಡಿದೆ. ಆದಷ್ಟು ಬೇಗ ಕಾಮಗಾರಿ ಆರಂಭಗೊಳ್ಳುವ ಸಾಧ್ಯತೆಯಿದೆ.

Advertisement

ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಟ್ವಾಡಿ ಕ್ರಾಸ್‌ ಬಳಿಯಿಂದ ಮೂಡ್ಲಕಟ್ಟೆ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸುಮಾರು 700 ಮೀ. ದೂರದ ರಸ್ತೆಯ ಪೈಕಿ ಈಗಾಗಲೇ ಸುಮಾರು 500 ಮೀ. ರಸ್ತೆ ಅಭಿವೃದ್ಧಿಯಾಗಿದೆ. ಬಾಕಿ ಉಳಿದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.

ಬಾಕಿ ಉಳಿದ ಸುಮಾರು 200 ಮೀ. ದೂರದ ರಸ್ತೆಯ ಸಂಪೂರ್ಣ ಮರು ಡಾಮರೀಕರಣ ಹಾಗೂ ವಾಹನ ಪಾರ್ಕಿಂಗ್‌ ಸ್ಥಳದಲ್ಲಿ ಇಂಟರ್‌ಲಾಕ್‌ ಅಳವಡಿಕೆ ಕಾರ್ಯವೂ ಈ 30 ಲಕ್ಷ ರೂ. ಅನುದಾನದಲ್ಲಿ ನಡೆಯಲಿದೆ.

ಶಾಸಕರ ಶಿಫಾರಸು

ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿಯ ಮನವಿಗೆ ಸ್ಪಂದಿಸಿದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು, ಲೋಕೋಪಯೋಗಿ ಇಲಾಖೆಗೆ ರಸ್ತೆ ಅಭಿವೃದ್ಧಿಗೆ ಅನುದಾನಕ್ಕಾಗಿ ಶಿಫಾರಸು ಮಾಡಿದ್ದರು. ಅದರಂತೆ 30 ಲಕ್ಷ ರೂ. ಅನುದಾನ ಮಂಜೂರಾಗಿದೆ.

Advertisement

ಸುದಿನ ವರದಿ

ಮೂಡ್ಲಕಟ್ಟೆಯಲ್ಲಿರುವ ರೈಲು ನಿಲ್ದಾಣವನ್ನು ಸಂಪರ್ಕಿಸುವ ರಸ್ತೆ ಹದಗೆಟ್ಟು ಇಲ್ಲಿಗೆ ಬರುವ ಪ್ರಯಾಣಿಕರು, ಪ್ರವಾಸಿಗರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ “ಉದಯವಾಣಿ ಸುದಿನ’ವು ಅನೇಕ ಬಾರಿ ವಿಶೇಷ ವರದಿ ಪ್ರಕಟಿಸಿತ್ತು. ಶೀಘ್ರ ಆರಂಭ ನಿರೀಕ್ಷೆ ಮೂಡ್ಲಕಟ್ಟೆ ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆಯ ಬಾಕಿ ಉಳಿದೆಡೆ ಅಭಿವೃದ್ಧಿ ಕಾಮಗಾರಿಗಾಗಿ ಶಾಸಕ ಶಿಫಾರಸಿನಡಿ ಲೋಕೋಪಯೋಗಿ ಇಲಾಖೆಯಿಂದ 30 ಲಕ್ಷ ರೂ. ಮಂಜೂರಾಗಿದೆ. ಟೆಂಡರ್‌ ಕೂಡ ಆಗಿದೆ. ಶೀಘ್ರ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆಯಿದೆ. – ಗಣೇಶ್‌ ಪುತ್ರನ್‌, ಅಧ್ಯಕ್ಷರು, ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ

Advertisement

Udayavani is now on Telegram. Click here to join our channel and stay updated with the latest news.

Next