Advertisement
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದಿಂದ ಅವಳಿನಗರದ ಪ್ರಮುಖ ರಸ್ತೆಗಳು, ವೃತ್ತಗಳು, ರಾಷ್ಟ್ರೀಯ ಹೆದ್ದಾರಿ, ಬೈಪಾಸ್-ವರ್ತುಲ ರಸ್ತೆಗಳ ಅಭಿವೃದ್ಧಿಗೆ 1200 ಕೋಟಿ ರೂ. ಅನುದಾನ ಬಂದಿದೆ.
Related Articles
Advertisement
ಫಸಲ್ ಬಿಮಾ ಸರಿಪಡಿಸುತ್ತೇವೆ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಳೆದ ವರ್ಷದ ಮುಂಗಾರಿನಲ್ಲಿ 89 ಸಾವಿರ ರೈತರು 16 ಕೋಟಿ ರೂ. ವಿಮೆ ಹಣ ತುಂಬಿದ್ದರು. ಅವರಿಗೆ 172 ಕೋಟಿ ರೂ. ಹಣ ಬಂದಿದ್ದು, ನೇರವಾಗಿ ಅದನ್ನು ರೈತರ ಖಾತೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಬೇಕು. ವಿಮೆ ಕಂಪನಿಯಿಂದ ಹಣ ಬಂದರೂ ರಾಜ್ಯ ಸರ್ಕಾರ ಅದನ್ನು ರೈತರಿಗೆ ನೀಡುತ್ತಿಲ್ಲ ಎಂದು ಹೇಳಿದರು. ಫಸಲ್ ಬಿಮಾ ಯೋಜನೆಯಲ್ಲಿ ಲೋಪದೋಷಗಳಿದ್ದರೆ ಖಂಡಿತವಾಗಿಯೂ ಅದನ್ನು ಚರ್ಚಿಸಿ ಪರಿಹರಿಸಲು ಚಿಂತನೆ ನಡೆಸಲಾಗುವುದು ಎಂದರು.
ಸಾಲಮನ್ನಾಕ್ಕಿಂತ ರೈತ ಕಲ್ಯಾಣ ಮುಖ್ಯ: ರೈತರ ಸಾಲ ಮನ್ನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬರೀ ರಾಜ್ಯಕ್ಕೆ ಮಾತ್ರ ಸೀಮಿತವಾದರೆ, ಕೇಂದ್ರ ಸರ್ಕಾರ ಇಡೀ ದೇಶದ ಸಾಲವನ್ನು ಮನ್ನಾ ಮಾಡಬೇಕಾಗುತ್ತದೆ. ಹೀಗಾಗಿ ರೈತರ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡುವುದಕ್ಕೆ ಕೇಂದ್ರ ಸರ್ಕಾರ ಹೆಚ್ಚು ಆಸಕ್ತವಾಗಿದೆ. ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಸದ್ಯಕ್ಕೆ ತನ್ನ ಯಾವುದೇ ನಿಲುವು ಹೇಳಿಲ್ಲ.
ಆದರೆ, ರೈತರ ಕಲ್ಯಾಣಕ್ಕೆ ಮಾತ್ರ ಬದ್ಧವಾಗಿದೆ ಎಂದರು. ಧಾರವಾಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏನು ಕೊಡುಗೆ ನೀಡಿದೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ 3 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಜನರಿಗೆ ನೀಡುತ್ತಿದ್ದೇನೆಯೇ ಹೊರತು ಇದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಅಲ್ಲವೇ ಅಲ್ಲ ಎಂದು ಜೋಶಿ ಹೇಳಿದರು.