Advertisement

ಗಡಿತಂಟೆ ಕೆದಕುತ್ತಿರುವ ಮಹಾ ಸಿಎಂ

11:24 PM Dec 25, 2019 | Lakshmi GovindaRaj |

ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಗಡಿ ತಂಟೆಯನ್ನು ಮಹಾ ರಾಷ್ಟ್ರ ಮುಖ್ಯಮಂತ್ರಿ ಕೆದಕುತ್ತಿದ್ದಾರೆ. ಇಷ್ಟಾ ದರೂ ರಾಜ್ಯದ ಹಿತ ಕಾಯುವ ನಿಟ್ಟಿನಲ್ಲಿ ಯಾವ ಪ್ರತಿಕ್ರಿಯೆಗೂ ಮುಂದಾಗದಿರುವುದನ್ನು ನೋಡಿದರೆ, ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ ಎನಿಸುತ್ತಿದೆ ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ ಆರೋಪಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Advertisement

ಮಹದಾಯಿ, ಕಳಸಾ- ಬಂಡೂರಿ ವಿಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ ಜಾವಡೇಕರ ಅವರು ರಾಜ್ಯದ ಗೃಹ ಸಚಿವರಿಗೆ ಬರೆದ ಪತ್ರಕ್ಕೆ ಬಿಜೆಪಿ ನಾಯಕರು ಸ್ವಾಗತ, ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಸಚಿವರ ಪತ್ರದ ಸಾರಾಂಶ ನೋಡಿದರೆ ಅದು ಕನ್ನಡಿಗರಿಗೆ ಮಾಡಿದ ಮೋಸ ಎಂಬುದು ಸ್ಪಷ್ಟವಾಗುತ್ತದೆ ಎಂದರು. ಗಡಿ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಉದ್ಧಟತನದ ವರ್ತನೆಯಷ್ಟೇ ಅಲ್ಲ, ಕರ್ನಾಟಕವನ್ನು ಅವಮಾನಿಸುವ ರೀತಿ ಹೇಳಿಕೆ ನೀಡಿದ್ದರೂ ರಾಜ್ಯ ಸರ್ಕಾರದಿಂದ ಇದು ವರೆಗೂ ಅಧಿಕೃತ ಹೇಳಿಕೆ ವ್ಯಕ್ತವಾಗಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next