Advertisement

ಮಂಗಳೂರು-ಕಾಸರಗೋಡು ಮಧ್ಯೆ ಉದ್ಯೋಗಿಗಳ ನಿತ್ಯ ಸಂಚಾರಕ್ಕೆ ಗ್ರೀನ್ ಸಿಗ್ನಲ್

03:59 PM Jun 03, 2020 | keerthan |

ಮಂಗಳೂರು: ಕೋವಿಡ್-19 ಲಾಕ್ ಡೌನ್ ನಿಂದ ಅಡ್ಡಿಯಾಗಿರುವ ಮಂಗಳೂರು – ಕಾಸರಗೋಡಿನ ಮಧ್ಯೆಯ ನಿತ್ಯ ಸಂಚಾರಕ್ಕೆ ಈಗ ಗ್ರೀನ್ ಸಿಗ್ನಲ್ ಸಿಕ್ಕಿದೆ. ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ನೀಡಿದ್ದಾರೆ.

Advertisement

ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಸಂಚರಿಸುತ್ತಾರೆ. ಇಂತವರಿಗೆ ಪಾಸ್ ಬಳಸಿ ನಿತ್ಯ ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದರು.

Dkdpermit ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ಸೂಚಿಸಲಾಗಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರಿಗಷ್ಟೇ ಅವಕಾಶ ನೀಡಲಾಗಿದೆ. ಉದ್ಯೋಗ ಹೊರತು ಅನ್ಯ ಕಾರ್ಯಕ್ಕೆ ಪಾಸ್ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಪಾಸ್ ಗೆ ಅರ್ಜಿ ಸಲ್ಲಿಸಲು ಆಧಾರ್, ಉದ್ಯೋಗ ವಿಳಾಸ, ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಪ್ರಯಾಣಿಕರು ನಿತ್ಯ ಥರ್ಮಲ್ ಸ್ಕ್ಯಾನ್ ಮತ್ತು ಆರೋಗ್ಯ ತಪಾಸಣೆ ಕಡ್ಡಾಯವಾಗಿರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next