Advertisement

ಕಾಶ್ಮೀರದಲ್ಲಿ ಒಂದೇ ದಿನ ಮೂರು ಕಡೆ ಉಗ್ರರ ದಾಳಿ: ಸಿಆರ್ ಪಿಎಫ್ ಬಂಕರ್ ಮೇಲೆ ಗ್ರೆನೇಡ್ ದಾಳಿ

09:48 AM Oct 03, 2021 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ಮೂರು ಪ್ರದೇಶಗಳಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಶನಿವಾರ ಉಗ್ರರ ಗುಂಡೇಟಿಗೆ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದು, ಶ್ರೀನಗರ ಪಟ್ಟಣದಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

Advertisement

ಶನಿವಾರವೇ ನಡೆದ ಮೂರನೇ ದಾಳಿಯಲ್ಲಿ ಅನಂತ್ ನಾಗ್ ಜಿಲ್ಲೆಯ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಬಂಕರ್ ಮೇಲೆ ಗ್ರೆನೇಡ್ ದಾಳಿ ಮಾಡಲಾಗಿದೆ. ಆದರೆ ಈ ದಾಳಿಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಕಾರಾ ನಗರ ಪ್ರದೇಶದಲ್ಲಿ ಸಂಜೆ 5: 50 ರ ಸುಮಾರಿಗೆ ಭಯೋತ್ಪಾದಕರು ಮಜೀದ್ ಅಹ್ಮದ್ ಗೊಜ್ರಿ ಮೇಲೆ ಗುಂಡು ಹಾರಿಸಿದರು. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಗಾಂಜಾ ಪೂರೈಕೆ: ಸಿನಿಮೀಯ ರೀತಿಯಲ್ಲಿ ಏಳು ಮಂದಿಯ ಬಂಧನ

ಘಟನೆ ನಡೆದ ತಕ್ಷಣ, ಪೊಲೀಸರು ಮತ್ತು ಭದ್ರತಾ ಪಡೆ ಪ್ರದೇಶವನ್ನು ಸುತ್ತುವರಿದಿದೆ. ನಗರದ ಎಲ್ಲಾ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ವಿವಿಧ ಸ್ಥಳಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.

Advertisement

ಅದಾಗ್ಯೂ ರಾತ್ರಿ 8 ಗಂಟೆ ಸುಮಾರಿಗೆ ಮತ್ತೋರ್ವನ ಮೇಲೆ ದಾಳಿ ನಡೆಸಲಾಗಿದೆ. ಮೊಹಮ್ಮದ್ ಶಾಫಿ ದಾರ್ ಎಂಬಾತನ ಮೇಲೆ ಗುಂಡು ಹಾರಿಸಲಾಗಿದ್ದು, ಆತ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತ್ ನಾಗ್‌ ಜಿಲ್ಲೆಯಲ್ಲಿ ಕೆಪಿ ರಸ್ತೆಯಲ್ಲಿರುವ ಸಿಆರ್‌ಪಿಎಫ್‌ನ 40 ಬೆಟಾಲಿಯನ್ ಬಂಕರ್ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next