Advertisement

ಕಿರಾಣಿ ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

11:19 AM Jul 14, 2022 | Team Udayavani |

ಸಂಕೇಶ್ವರ: ಸ್ಟೇಷನರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮತ್ತೊಂದು ಕಿರಾಣಿ ಅಂಗಡಿಗೆ ಆವರಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಸಂಕೇಶ್ವರ ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

Advertisement

ಸಂಕೇಶ್ವರದ ಹೃದಯ ಭಾಗವಾಗಿರುವ ನೆಹರು ರಸ್ತೆಯಲ್ಲಿನ ಕುಲಕರ್ಣಿ ಎಂಬ ಕುಟುಂಬಕ್ಕೆ ಈ ಅಂಗಡಿ ಸೇರಿದೆ. ಈ ಅಂಗಡಿಗೆ ಗುರುವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಂಗಡಿಯಲ್ಲಿ ಸ್ಷೇಷನರಿ ಸಾಮಗ್ರಿಗಳು ಹಾಗೂ ಪಟಾಕಿ ಇತ್ತು ಎಂದು ಹೇಳಲಾಗಿದೆ.

ಈ ಘಟನೆಯಲ್ಲಿ ಬದಿಯ ಕಾಳುಗಳುಳ್ಳ ಕಿರಾಣಿ ಅಂಗಡಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಿರಾಣಿ ಅಂಗಡಿಯಲ್ಲಿ ಇದ್ದ ಬೆಳೆ ಕಾಳು ಕಡಿಗಳು ಬೆಂಕಿಗೆ ಆಹುತಿಯಾಗಿವೆ. ಈ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕಾರು-ಆಟೋ ಮುಖಾಮುಖಿ ಢಿಕ್ಕಿ: ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಸಂಕೇಶ್ವರ ಪಿಎಸ್ ಐ ಗಣಪತಿ ಕೊಂಗನೊಳಿ, ಪೊಲೀಸರು ಮತ್ತು ಪುರಸಭೆ ಮುಖ್ಯಾಧಿಕಾರಿ ರಾಜು ಚೌಗಲಾ ಮತ್ತು ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next