Advertisement

Watch: ವರದಕ್ಷಿಣೆಗೆ ಬೇಡಿಕೆ ಇಟ್ಟ ವರನನ್ನು ಮರಕ್ಕೆ ಕಟ್ಟಿ ಹಾಕಿ ಒತ್ತೆಯಾಳನ್ನಾಗಿಸಿದ್ರು!

11:22 AM Jun 16, 2023 | Team Udayavani |

ಲಕ್ನೋ: ವಿವಾಹ ಮಂಟಪದಲ್ಲಿ ವರ, ವಧುವಿನ ಕೊರಳಿಗೆ ಮಾಲೆಯನ್ನು ಹಾಕುವ ಮೊದಲು ವರದಕ್ಷಿಣಿಗೆ ಬೇಡಿಕೆ ಇಟ್ಟಿದ್ದ, ಇದರಿಂದ ವಧುವಿನ ಪೋಷಕರು ಆಘಾತಕ್ಕೊಳಗಾಗಿದ್ದರು. ಬಳಿಕ ವರನನ್ನು ಮರಕ್ಕೆ ಕಟ್ಟಿಹಾಕಿ ಒತ್ತೆಯಾಳನ್ನಾಗಿ ಇರಿಸಿಕೊಂಡ ಘಟನೆ ಉತ್ತರಪ್ರದೇಶದ ಪ್ರತಾಪ್‌ ಗಢದಲ್ಲಿ ನಡೆದಿದೆ.

Advertisement

ಇದನ್ನೂ ಓದಿ:UCC: ಧರ್ಮಗುರುಗಳು ಮಠದಲ್ಲಿದ್ದು ಪೂಜೆ ನಡೆಸಬೇಕು, ರಾಜಕೀಯವಲ್ಲ; ಚಂದ್ರಶೇಖರ್ ರಾವ್ ಗುಡುಗು

ವರನನ್ನು ಮರಕ್ಕೆ ಕಟ್ಟಿ ಹಾಕಿ, ಒತ್ತೆಯಾಳನ್ನಾಗಿ ಇರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿವಾಹ ಮಂಟಪದಲ್ಲಿ ವಧು-ವರ ಹಾರ ಬದಲಾಯಿಸಿಕೊಳ್ಳುವ ಸಮಯದಲ್ಲೇ, ವರ ಅಮರ್‌ ಜಿತ್‌ ವರ್ಮಾ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ.

ಈ ಸಂದರ್ಭದಲ್ಲಿ ಅಮರ್‌ ಜಿತ್‌ ಕುಟುಂಬ ಸದಸ್ಯರು, ಗೆಳೆಯರು ವಧುವಿನ ಸಂಬಂಧಿಕರ ಜೊತೆ ಅನುಚಿತವಾಗಿ ನಡೆದುಕೊಂಡಿದ್ದು, ಇದರಿಂದಾಗಿ ಎರಡು ಕುಟುಂಬಗಳ ನಡುವೆ ಹೊಯ್‌ ಕೈ ನಡೆದಿರುವುದಾಗಿ ವರದಿ ತಿಳಿಸಿದೆ.

ತೀವ್ರ ಆಕ್ರೋಶಗೊಂಡಿದ್ದ ವಧುವಿನ ಸಂಬಂಧಿಕರು ವರನನ್ನು ಹಲವು ಗಂಟೆಗಳ ಕಾಲ ಮರಕ್ಕೆ ಕಟ್ಟಿ ಹಾಕಿದ್ದರು. ಎರಡು ಕುಟುಂಬಗಳ ಹಿರಿಯರು ಸಂಧಾನಕ್ಕಾಗಿ ಮಾತುಕತೆ ನಡೆಸಿದ್ದರೂ ಕೂಡಾ ಅದು ವಿಫಲವಾಗಿತ್ತು.

Advertisement


ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ವರನನ್ನು ಬಂಧಮುಕ್ತಗೊಳಿಸಿ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದರು. ಪೊಲೀಸ್‌ ಠಾಣೆಯಲ್ಲೂ ಸಂಧಾನ ವಿಫಲಗೊಂಡಿರುವುದಾಗಿ ಪೊಲೀಸ್‌ ಠಾಣಾಧಿಕಾರಿ ಮಂಥಾತಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next