Advertisement
ಇತ್ತೀಚಿನ ವರ್ಷಗಳಲ್ಲಿ ಕರಾವಳಿ ಜಿಲ್ಲೆಗಳೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನೀರಿಲ್ಲದೇ ಪಾಳು ಬೀಳುವ ಕೊಳವೆಬಾವಿಗಳ ಸಂಖ್ಯೆ ಹೆಚ್ಚುತ್ತಿದೆ. ಅನೇಕ ಕಡೆ ಕೊಳವೆಬಾವಿಗಳೇ ಗ್ರಾ.ಪಂ.ಗಳ ನೀರಿನ ಮೂಲ ಗಳೂ ಆಗಿವೆ. ಆದರೆ ಅಂತ ರ್ಜಲ ಮಟ್ಟದ ತೀವ್ರ ಕುಸಿತ ದಿಂದಾಗಿ ನೀರಿಗೆ ಬರ ಎದು ರಾ ಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಕೊಳವೆಬಾವಿ ಗಳ ಪುನಶ್ಚೇತನ ಈ ಯೋಜನೆಯ ಉದ್ದೇಶ.
ದ.ಕ. ಜಿಲ್ಲೆಯಲ್ಲಿ 223 ಮತ್ತು ಉಡುಪಿ ಜಿಲ್ಲೆಯಲ್ಲಿ 155 ಗ್ರಾ.ಪಂ.ಗಳಿದ್ದು ತಲಾ 5ರಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 1,115 ಮತ್ತು ಉಡುಪಿ ಜಿಲ್ಲೆಯಲ್ಲಿ 775 ಕೊಳವೆಬಾವಿಗಳಿಗೆ ಕಾಯಕಲ್ಪ ಸಿಗುವ ಸಾಧ್ಯತೆ ಇದೆ. ಎರಡು ವರ್ಷಗಳ ಹಿಂದೆ ದ.ಕ. ಜಿಲ್ಲೆಯಲ್ಲಿ ಸುಮಾರು 600 ಹಾಗೂ ಉಡುಪಿ ಜಿಲ್ಲೆಯಲ್ಲಿ ಸುಮಾರು 400 ನಿಷ್ಕ್ರಿಯ ಕೊಳವೆ ಬಾವಿಗಳನ್ನು ಗುರುತಿಸಲಾಗಿತ್ತು. ಪ್ರಸ್ತುತ ಈ ಸಂಖ್ಯೆ ಹೆಚ್ಚಾಗಿರುವ ಸಾಧ್ಯತೆ ಇದ್ದು, ನಿಖರವಾಗಿ ಗುರುತಿಸಲು ಸೂಚಿಸಲಾಗಿದೆ. ನೀರಿನ ಲಭ್ಯತೆಯೇ ಇರದ ಕೊಳವೆಬಾವಿಗಳ ಬದಲು ಬೇಸಗೆಯ ಎರಡು-ಮೂರು ತಿಂಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿತ ಕಾಣುವ ಕೊಳವೆ ಬಾವಿಗಳನ್ನು ಪರಿಗಣಿಸಲಾಗುತ್ತಿದೆ.
Related Articles
ಇದುವರೆಗೆ ಗ್ರಾ.ಪಂ.ಗಳ ಪ್ರಸ್ತಾವ ಪ್ರಕಾರ ನರೇಗಾದಡಿ ಕೊಳವೆಬಾವಿಗಳ ಪುನಶ್ಚೇತನ ಕಾಮಗಾರಿ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಕನಿಷ್ಠ 5 ಕೊಳವೆಬಾವಿಗಳ ಪುನಶ್ಚೇತನಕ್ಕೆ ನಿರ್ಧರಿಸಲಾಗಿದೆ. 2021-22 ಹಾಗೂ 2022-23ರಲ್ಲಿ ಉಡುಪಿ ಜಿಲ್ಲೆಯಲ್ಲಿ 71 ಹಾಗೂ ದ.ಕ. ಜಿಲ್ಲೆಯಲ್ಲಿ 95 ನಿಷ್ಕ್ರಿಯ ಕೊಳವೆಬಾವಿಗಳನ್ನು ಪುನಶ್ಚೇತನಗೊಳಿಸಲಾಗಿತ್ತು. ಇವುಗಳಲ್ಲಿ ಕೆಲವೆಡೆ ಅಂತರ್ಜಲ ಪ್ರಮಾಣ ಏರಿಕೆಯಾಗಿದೆ. ಕರಾವಳಿ ಭಾಗದ ಮಣ್ಣಿನ ಸ್ವರೂಪ, ಕೊಳವೆಬಾವಿ ಬಳಿ ಕಾಮಗಾರಿಗೆ ಸೂಕ್ತ ಸ್ಥಳ ಹೊಂದಿಸುವುದೇ ದೊಡ್ಡ ಸವಾಲು ಎನ್ನುತ್ತಾರೆ ಅಧಿಕಾರಿಗಳು.
Advertisement
ಅಂತರ್ಜಲ ಹೆಚ್ಚಳಕ್ಕೆ ಕೊಳವೆಬಾವಿ ಪುನಶ್ಚೇತನ ಕಾಮಗಾರಿ ಅನುಷ್ಠಾನಕ್ಕೆ ವೇಗ ಒದಗಿಸಿದ್ದು, ನರೇಗಾ ವತಿಯಿಂದ ಕೈಗೊಳ್ಳಲಾಗುತ್ತಿದೆ. ಹಲವೆಡೆ ಯಶಸ್ವಿಯಾಗಿದ್ದು, ಈ ಬಾರಿ ಒಂದು ಗ್ರಾ.ಪಂ.ನಿಂದ ತಲಾ 5 ನಿಷ್ಕ್ರಿಯ ಕೊಳವೆ ಬಾವಿ ಗುರುತಿಸಿ ಪುನಶ್ಚೇತನಗೊಳಿಸಲಾಗುತ್ತಿದೆ.– ಆನಂದ ಕುಮಾರ್, ಉಪಕಾರ್ಯದರ್ಶಿ, ದ.ಕ. ಜಿ.ಪಂ.
– ಪ್ರಸನ್ನಎಚ್., ಜಿ.ಪಂ. ಸಿಇಒ, ಉಡುಪಿ – ಸಂತೋಷ್ ಬೊಳ್ಳೆಟ್ಟು