Advertisement

ಬೆಳವಣಿಗೆ ಆಧಾರಿತ ಬಜೆಟ್‌: ಎಸ್‌.ಎಂ. ಕೃಷ್ಣ

08:52 PM Feb 01, 2022 | Team Udayavani |

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಕೇಂದ್ರ ಬಜೆಟ್‌ ಬೆಳವಣಿಗೆ ಆಧಾರಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಎಸ್‌.ಎಂ. ಕೃಷ್ಣ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಶಿಕ್ಷಣ, ಕೃಷಿ, ಉದ್ಯೋಗ ಸೃಷ್ಠಿ, ಮೂಲಭೂತ ಸೌಕರ್ಯ, ಸಾರಿಗೆ ಸಂಪರ್ಕ, ವಿಜ್ಞಾನ ತಂತ್ರಜ್ಞಾನ, ಹಲವು ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್‌ ಇದಾಗಿದೆ.

ದೇಶದ ಕಟ್ಟ ಕಡೆಯ ವ್ಯಕ್ತಿಗೆ ತಲುಪುವ ಬಜೆಟ್‌ ಇದಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಯಾವುದೇ ಕ್ಷೇತ್ರವನ್ನು ನಿರ್ಲಕ್ಷಿಸದೇ ಎಲ್ಲ ಕ್ಷೇತ್ರಳಿಗೆ ಉತ್ತೇಜನ ನೀಡುವ ಬಜೆಟ್‌ ನೀಡಿದ್ದಾರೆ ಎಂದು ಎಸ್‌.ಎಂ. ಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next