Advertisement

ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ ಜಿಟಿಡಿ

10:47 PM Feb 17, 2020 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿಗೆ ಮತ ಚಲಾಯಿಸಿದ್ದಾರೆ. “ರಾಜ್ಯದ ಹಿತದೃಷ್ಟಿಯಿಂದ ನಾನು ಲಕ್ಷ್ಮಣ ಸವದಿಗೆ ಮತ ಚಲಾಯಿಸಿದ್ದೇನೆ. ನಮ್ಮ ಪಕ್ಷದ ಅಭ್ಯರ್ಥಿ ಕಣದಲ್ಲಿ ಇರಲಿಲ್ಲ. ಕಣದಲ್ಲಿ ಇದ್ದ ಪಕ್ಷೇತರ ಅಭ್ಯರ್ಥಿ ನಿವೃತ್ತಿ ಘೋಷಿಸಿದ್ದರು. ಹೀಗಾಗಿ, ನಾನು ನನ್ನ ಹಕ್ಕು ಚಲಾಯಿಸಿದೆ.

Advertisement

ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಪರಿಷತ್‌ ಚುನಾವಣೆಯಲ್ಲಿ ಮತ ಚಲಾಯಿಸಬಾರದು ಎಂದು ಸೂಚನೆ ನೀಡಿದ್ದು ನನಗೆ ಗೊತ್ತಿಲ್ಲ. ಪಕ್ಷದಿಂದ ಯಾವುದೇ ವಿಪ್‌ ಸಹ ನೀಡಿರಲಿಲ್ಲ. ಹೀಗಾಗಿ, ಲಕ್ಷ್ಮಣ ಸವದಿಗೆ ಮತ ಹಾಕಿದ್ದೇನೆ’ ಎಂದು ಜಿ.ಟಿ.ದೇವೇಗೌಡರು ಸಮರ್ಥಿಸಿಕೊಂಡರು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಜತೆ ನನಗೆ ಯಾವುದೇ ಅಸಮಾಧಾನವಿಲ್ಲ.

ಕುಮಾರಸ್ವಾಮಿಯವರ ಪುತ್ರ ನಿಖೀಲ್‌ ನಿಶ್ಚಿತಾರ್ಥಕ್ಕೂ ಹೋಗಿದ್ದೆ ಎಂದು ಹೇಳಿದರು. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, “ಜಿ.ಟಿ.ದೇವೇಗೌಡರು ನಮ್ಮ ಪಕ್ಷದಲ್ಲಿದ್ದಾರೋ, ಇಲ್ಲವೋ ಎಂಬುದು ಅವರಿಗೇ ಗೊತ್ತಿದೆ. ಅವರು ಎಲ್ಲಿದ್ದಾರೋ ನನಗೆ ಗೊತ್ತಿಲ್ಲ, ಮುಂದೆ ಎಲ್ಲಿರುತ್ತಾರೋ ಅದೂ ಗೊತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಯ ಸೂಚನೆ ಧಿಕ್ಕರಿಸಿರುವ ವಿಚಾರವನ್ನು ಅವರಿಗೇ ಬಿಡುತ್ತೇನೆ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next