Advertisement

ಮೈಮುಲ್‌ ಅಧ್ಯಕ್ಷರಾಗಿ ಜಿಟಿಡಿ ಆಪ್ತ ಆಯ್ಕೆ

11:36 PM Aug 14, 2019 | Team Udayavani |

ಮೈಸೂರು: ಮೈಸೂರು ಜಿಲ್ಲಾ ಹಾಲು ಒಕ್ಕೂಟದ (ಮೈಮುಲ್‌) ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರ ಆಪ್ತ ಮಾವಿನಹಳ್ಳಿ ಎಸ್‌.ಸಿದ್ದೇಗೌಡ ಅವಿರೋಧವಾಗಿ ಆಯ್ಕೆಯಾದರು. ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ಸಹೋದರಿ ಪುತ್ರ ಎಸ್‌.ಸಿ.ಅಶೋಕ್‌ ಅವರನ್ನು ಮೈಮುಲ್‌ ನಿರ್ದೇಶಕರನ್ನಾಗಿ ನಾಮ ನಿರ್ದೇಶನ ಮಾಡಿದ್ದರು.

Advertisement

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಮಾಜಿ ಸಚಿವ ಜಿ.ಟಿ.ದೇವೇಗೌಡರ ಆಪ್ತ ಮಾವಿನಹಳ್ಳಿ ಎಸ್‌.ಸಿದ್ದೇಗೌಡ ಹಾಗೂ ಅಶೋಕ್‌ ನಾಮಪತ್ರ ಸಲ್ಲಿಸಿದ್ದರು. ಈ ಮಧ್ಯೆ, ಮೈಸೂರಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರನ್ನು ಅನರ್ಹ ಶಾಸಕ ಎಚ್‌.ವಿಶ್ವನಾಥ್‌ ಜೊತೆ ಭೇಟಿ ಮಾಡಿದ್ದ ಜಿ.ಟಿ.ದೇವೇಗೌಡ, ಈ ಸಂಬಂಧ ಮಾತುಕತೆ ನಡೆಸಿದ್ದರು. ಮಾತುಕತೆ ಫ‌ಲವಾಗಿ ಅಶೋಕ್‌ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next