Advertisement

Karnataka: ಗ್ಯಾರಂಟಿ ಯೋಜನೆ ರದ್ದಾಗದು: ಜಾರ್ಜ್‌

11:02 PM Feb 03, 2024 | Team Udayavani |

ಶಿವಮೊಗ್ಗ: ಜನಹಿತ ಕಾರ್ಯಗಳನ್ನು ಕಾಂಗ್ರೆಸ್‌ ಯಾವಾಗಲೂ ಮುಂದುವರಿಸಿಕೊಂಡು ಬರುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಹೇಳಿಕೆಗಳನ್ನು ಬಿಜೆಪಿಯವರು ನೀಡುತ್ತಿದ್ದಾರೆ. ಶಾಸಕ ಬಾಲಕೃಷ್ಣ ಗ್ಯಾರಂಟಿ ರದ್ದಾಗುವ ಬಗ್ಗೆ ನೀಡುವ ಹೇಳಿಕೆ ಮುಖ್ಯವೋ, ಸಿಎಂ ನೀಡುವ ಹೇಳಿಕೆ ಮುಖ್ಯವೋ. ಸಿಎಂ ಸಿದ್ದರಾಮಯ್ಯ ಯಾವುದೇ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ನಾನು ಸಚಿವನಾಗಿದ್ದೆ. ಅಂದು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಿದ್ದನ್ನು ರದ್ದು ಮಾಡಿದ್ದೇವಾ? ಸಂಸದ ಡಿ.ಕೆ.ಸುರೇಶ್‌ ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ನೀಡಿದ ಪ್ರತಿಕ್ರಿಯೆಗಳಿಗೆ ನಾನು ಬದ್ಧನಾಗಿದ್ದೇನೆ. ಈಶ್ವರಪ್ಪನವರು ಹೇಳಿದ ಕೂಡಲೇ ಉತ್ತರ ಕೊಡಲು ಆಗಲ್ಲ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಬಗ್ಗೆ ಪ್ರಸ್ತಾವ ನಡೆದಿಲ್ಲ. ಬೆಂಗಳೂರಿಗಾಗಿ ಮೇಕೆದಾಟು ಯೋಜನೆ ಆರಂಭಗೊಳ್ಳುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next