Advertisement

Guarantee ಯೋಜನೆ ಅನುಷ್ಠಾನ ಸಮಿತಿಗೆ ಎಚ್‌.ಎಂ. ರೇವಣ್ಣ ಅಧ್ಯಕ್ಷ

11:12 PM Feb 28, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ 5 ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವ ಸರಕಾರ, ಐವರು ಉಪಾಧ್ಯಕ್ಷರನ್ನು ನೇಮಿಸಿದೆ.

Advertisement

ರೇವಣ್ಣ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶಿಸಲಾಗಿದೆ. ಅಂತೆಯೇ ಸಮಿತಿಯ ಉಪಾಧ್ಯಕ್ಷರಾಗಿ ಮಾಜಿ ಸಚಿವ ಎಸ್‌.ಆರ್‌. ಪಾಟೀಲ್‌, ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್‌, ಕಾಂಗ್ರೆಸ್‌ನ ಮೆಹರೋಸ್‌ ಖಾನ್‌, ಸೂರಜ್‌ ಹೆಗ್ಡೆ ಅವರನ್ನು ನೇಮಿಸಲಾಗಿದೆ.

ಜತೆಗೆ 44 ವಿವಿಧ ನಿಗಮ-ಮಂಡಳಿಗಳಿಗೂ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಮೊದಲ ಬಾರಿ 34 ಶಾಸಕರಿಗೆ ಅವಕಾಶ ಕಲ್ಪಿಸಿದ್ದ ಸರಕಾರ, ಈ ಬಾರಿ ಕಾಂಗ್ರೆಸ್‌ನ 44 ಮಂದಿ ಮುಖಂಡರು/ಕಾರ್ಯಕರ್ತರಿಗೆ ಅವಕಾಶ ನೀಡಿದೆ.

ಇಷ್ಟೂ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಂಕಿತ ಹಾಕುವ ಮೂಲಕ ಅಧಿಕೃತ ಅನುಮೋದನೆ ನೀಡಿದ್ದು, ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಆದೇಶವನ್ನು ಆಯಾ ಇಲಾಖೆಗಳು ಹೊರಡಿಸಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next