Advertisement

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

09:38 PM Jun 05, 2023 | Team Udayavani |

ಮೈಸೂರು: ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್‌ ಬಿಲ್‌ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಜಾರಿ ಮಾಡಲು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಗ್ಯಾರಂಟಿ ಕಾರ್ಡ್‌ ಒಂದು ಕಡೆಯಾದರೆ ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು ನೀಡುತ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆ ಜಾರಿ ವಿಚಾರದಲ್ಲಿ ಷರತ್ತು ಹಾಕಿರುವ ರಾಜ್ಯ ಸರ್ಕಾರದ ನಡೆಯನ್ನು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್‌ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಆಶ್ವಾಸನೆಗಳ ಮೇಲೆ ಜನರು ಸಾಕಷ್ಟು ನೀರಿಕ್ಷೆಯಲ್ಲಿದ್ದರು. ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಷರತ್ತು ವಿಧಿಸುತ್ತಿದ್ದಾರೆ, ಇದು ಸರಿಯಲ್ಲ. ಈ ಎಲ್ಲ ವನ್ನೂ ಬಿಜೆಪಿ ಕಾದು ನೋಡುತ್ತಿದೆ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ಎಷ್ಟು ಹಣ ಬೇಕಾಗುತ್ತದೆ. ಅದಕ್ಕೆ ಹಣವನ್ನು ಹೇಗೆ ಹೊಂದಿಸಿಕೊಳ್ಳುತ್ತಾರೆ, ಹೊಸ ತೆರಿಗೆ ಹಾಕುತ್ತಾರಾ ಅಥವಾ ಸಾಲ ಮಾಡುತ್ತಾರಾ ಇದೆಲ್ಲವನ್ನೂ ಸಹ ಬಿಜೆಪಿ ಗಮನಿಸುತ್ತಿದೆ. ಕಾಂಗ್ರೆಸ್‌ ಕೊಟ್ಟ ಭರವಸೆ ಯಾಥಾವತ್ತಾಗಿ ಜನರಿಗೆ ತಲುಪಬೇಕು. ಇದಕ್ಕೆ ಯಾವುದೇ ಕಂಡಿಷನ್‌ ಹಾಕಬಾರದು. ಈಗಾಗಲೇ ವಿದ್ಯುತ್‌ ದರ ಹೆಚ್ಚಳ ಮಾಡಿದ್ದಾರೆ. ಜತೆಗೆ ಗ್ಯಾರಂಟಿ ಯೋಜನೆ ಜಾರಿಗೆ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆಂದು ಕಿಡಿಕಾರಿದರು.

ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ಮಾತನಾಡಿ, ಸಚಿವರ ಹೇಳಿಕೆಯನ್ನು ಗಮನಿ ಸಿದರೆ ದೇಶದ ಸಂಸ್ಕೃತಿಯ ಅರಿವು, ಕಾಳಜಿ ಇಲ್ಲದ ವ್ಯಕ್ತಿ ಎನಿಸುತ್ತದೆ. ಈ ರೀತಿಯ ಉಡಾಫೆ ಹೇಳಿಕೆಯನ್ನು ರಾಜ್ಯದ ಜನರು ನೀರಿಕ್ಷೆ ಮಾಡರಲಿಲ್ಲ. ಅನೇಕ ಸಚಿವರು ಗೆದ್ದಿರುವ ವಿಶ್ವಾಸದಲ್ಲಿ ಅನೇಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಿದ್ದಾರೆ. ನಮ್ಮ ಹಿಂದೂ ಸಂಸ್ಕೃತಿ, ಪರಂಪರೆ ಗೊತ್ತಿದ್ದರೆ ಈ ರೀತಿ ಹೇಳಿಕೆ ಕೊಡುತ್ತಿರಲಿಲ್ಲ. ನಾಳೆಯಿಂದ ಬಿಜೆಪಿಯವರು ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಜನ ಸಾಮಾನ್ಯರು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next