Advertisement

ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆ ಸಲ್ಲ: ಎಚ್‌ಡಿಕೆ

11:51 PM Mar 05, 2024 | Team Udayavani |

ಬೆಂಗಳೂರು: ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ಕಾಂಗ್ರೆಸ್‌ದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ಬಗ್ಗೆ “ಎಕ್ಸ್‌’ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರಕಾರ ಗ್ಯಾರಂಟಿ ಸಮೀಕ್ಷೆ ಮಾಡಿಸುವುದು ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ಗ್ಯಾರಂಟಿ ಸ್ವಯಂ ಸೇವಕರು ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಎಚ್‌.ಎಂ.ರೇವಣ್ಣ ಅವರಿಗೆ ಸಂಪುಟ ದರ್ಜೆ ಕೊಟ್ಟು ರಚಿಸಲಾಗಿರುವ ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next