Advertisement

ಅರಣ್ಯ ಅಧಿಕಾರಿಗಳಿಂದ ಕೃಷಿ ಭೂಮಿ ತೆರವು ಕಾರ್ಯಾಚರಣೆ : ಕಂಗಾಲಾದ ರೈತ ಕುಟುಂಬ

03:34 PM Mar 06, 2022 | Team Udayavani |

ಗುಬ್ಬಿ : ಕಳೆದ ಹತ್ತಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಜಮೀನನ್ನು ಯಾವುದೇ ನೋಟಿಸ್ ನೀಡದೆ ಏಕಾಏಕಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೃಷಿ ಭೂಮಿಯನ್ನು ತೆರವುಗೊಳಿಸಿದ ಘಟನೆ ಗುಬ್ಬಿ ತಾಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ಭಾನುವಾರ ನಡೆದಿದೆ.

Advertisement

ಸರ್ವೇ ನಂಬರ್ 116. ಗುಬ್ಬಿ ತಾಲೂಕು ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದಲ್ಲಿ ಶಾರದಮ್ಮ ದಿ.ದೊಡ್ಡತಿಮ್ಮಯ್ಯ ಎಂಬುವವರ ಜಮೀನಿನಲ್ಲಿ ಯಾವುದೇ ನೋಟಿಸ್ ನೀಡದೆ, ಮೀಸಲು ಅರಣ್ಯ ಪ್ರದೇಶ ಎಂದು ವಲಯ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಹಾಗೂ ಸಿಬಂದಿಗಳು ಸೇರಿ ಪೊಲೀಸ್ ಭದ್ರತೆಯಲ್ಲಿ ಅಡಕೆ ಮರ ಹಾಗೂ ತೆಂಗಿನ ಮರಗಳನ್ನು ತೆರವುಗೊಳಿಸಿದ್ದಾರೆ ಇದರಿಂದ ದಿಕ್ಕು ತೋಚದ ಬಡ ರೈತ ಕುಟುಂಬ ಬೀದಿಗೆ ಬಿದ್ದಂತಾಗಿದೆ.

ಈ ವಿಚಾರವಾಗಿ ರೈತ ಮಹಿಳೆ ಶಾರದಮ್ಮ ಕೋರ್ಟ್ ಗೆ ಆಫೀಲ್ ಹೋಗಿದ್ದು, ತಡೆ ಅರ್ಜಿಯನ್ನು ಸೋಮವಾರ ತೋರಿಸುತ್ತೇವೆ ಎಂದು ಅಂಗಲಾಚಿದರು ಅರಣ್ಯಾಧಿಕಾರಿಗಳು ಮಾತ್ರ ಯಾವುದಕ್ಕೂ ಜಗ್ಗಲಿಲ್ಲ.

ಇದನ್ನೂ ಓದಿ : ಮುಸ್ಲಿಂ ಲೀಗ್ ನಾಯಕ ಸೈಯದ್ ಹೈದರಾಲಿ ಶಿಹಾಬ್ ತಂಗಳ್ ನಿಧನ

Advertisement

ಇದೊಂದು ಉದ್ದೇಶಪೂರ್ವಕವಾಗಿ ನಡೆದ ಕೃತ್ಯ ಎನ್ನಲಾಗಿದ್ದು, ಅಧಿಕಾರಿಗಳು ಭಾನುವಾರದಂದೆ ತೆರವುಮಾಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕಳೆದ 10 ವರ್ಷಗಳ ಹಿಂದೆ ಅರಣ್ಯ ಅಧಿಕಾರಿಗಳು ಬಂದು ಸರ್ವೇ ಕಲ್ಲನ್ನು ಹಾಕಿದ್ದಾರೆ. ಇಂದು ಯಾವುದೇ ಮಾಹಿತಿಯನ್ನು ನೀಡದೆ ಏಕಾಏಕಿ ಅಡಕೆ, ತೆಂಗು ಮರಗಳನ್ನು ಉರುಳಿಸುತ್ತಿರುವುದು ಆರಣ್ಯಧಿಕಾರಿಗಳ ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next