Advertisement

Gudibanda: ಮನೆಗೆ ನುಗ್ಗಿ12 ಲಕ್ಷ ರೂ ಮೌಲ್ಯದ ಬಂಗಾರ, ನಗದು ಕಳ್ಳತನ

08:49 PM Dec 07, 2023 | Team Udayavani |

ಗುಡಿಬಂಡೆ: ತಾಲೂಕಿನ ಕೊಂಡರೆಡ್ಡಿಹಳ್ಳಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಮನೆಗೆ ಕಳ್ಳರು ನುಗ್ಗಿ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಬಂಗಾರದ ಒಡವೆಗಳು, ಎರಡು ಲಕ್ಷ ರೂ.ನಗದು ಕಳ್ಳತನ ಮಡಿರುವ ಘಟನ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕೊಂಡರೆಡ್ಡಿಹಳ್ಳಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಮನೆಯ ಮಂದಿಯವರೆಲ್ಲಾ ಬೆಳಿಗ್ಗೆಯೆ ಹತ್ತಿರುದಲ್ಲಿರುವ ಅವರ ಸ್ವಂತ ಹೊಲಕ್ಕೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು, ಇದನ್ನೇ ಗಮನಸಿದ ಕಳ್ಳರು ಬೆಳಗ್ಗೆ ಸುಮಾರು11.30 ರಿಂದ 12 ಗಂಟೆಯ ಒಳಗೆ, ಮನೆಯಲ್ಲಿ ಯಾರೂ ಇಲ್ಲದೆ ಇರುವುದನ್ನು ಗಮನಿಸಿ, ಮನೆಯ ಬೀಗವನ್ನು ಮುರಿದು, ಬೀರುವಿನಲ್ಲಿದ್ದ ಎರಡು ಲಕ್ಷ ರೂ. ನಗದು, ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಶ್ರೀರಾಮಪ್ಪ ಮತ್ತು ಮಗ ಸತೀಶ್ ರವರಿಗೆ ಮನೆಯಾಕೆ ರತ್ನಮ್ಮ ಬೆಳಗ್ಗೆ ಸುಮಾರು 11 ಗಂಟೆಗೆ ಊಟ ತೆಗೆದುಕೊಂಡು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದು, ಇದೇ ಸಮಯ ನೊಡಿಕೊಂಡು ಕಳ್ಳಲು ಮನೆಯ ಬೀಗ ಮುರಿದು ನಗದು, ಒಡವೆ ದೋಚಿ ಪರಾರಿಯಾಗಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ರೈತ ಶ್ರೀರಾಮಪ್ಪ, ಸತೀಶ್ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು, ಒಳ ಹೋಗಿ ನೋಡಿದಾಗ ಬೀರು ಬಾಗಿಲು ಹೊಡೆದಿರುವುದನ್ನು ನೋಡಿ ಗುಡಿಬಂಡೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ, ಸ್ಥಳಕ್ಕೆ ಪೊಲೀಸ್ ಉಪನಿರೀಕ್ಷಕ ಶಿವಣ್ಣ ಸಿಬ್ಬಂದಿ ಸ್ಥಳಕ್ಕೆ ಪರಿಶೀಲನೆ ನಡೆಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳದ ತಂಡದವರು ಅಗಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next