Advertisement

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

10:39 AM Jul 13, 2024 | Team Udayavani |

ಗುಡಿಬಂಡೆ: ತಾಲೂಕಿನಲ್ಲಿ ಎರಡು ಕಡೆ ನಡೆದ ದ್ವಿಚಕ್ರ ವಾಹನ ಅಪಘಾತಗಳಲ್ಲಿ ಒಬ್ಬ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಇನ್ನೊಬ್ಬ ಸವಾರನ ಎರಡೂ ಕಾಲುಗಳನ್ನು ಮುರಿದುಕೊಂಡ ಘಟನೆ ನಡೆದಿದೆ.

Advertisement

ಹೊಸಕೋಟೆ ತಾಲೂಕಿನ ಬಿದರಳ್ಳಿ ಗ್ರಾಮದ ಮಲ್ಲಿಕಾರ್ಜುನ ಮೃತಪಟ್ಟ ಸವಾರ ಎಂದು ತಿಳಿದು ಬಂದಿದೆ.

ಗುಡಿಬಂಡೆ ಠಾಣಾ ವ್ಯಾಪ್ತಿಯ ಬೊಮ್ಮಗಾನಹಳ್ಳಿ ಸಮೀಪದ ಕರಿಕಮಾಕಲಹಳ್ಳಿ ತಿರುವಿನಲ್ಲಿ ಬುಲೆರೋ ಲಗೇಜ್ ಗಾಡಿ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದರು. ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2ನೇ ಪ್ರಕರಣ:

ತಾಲೂಕಿನ ಗೌರಿಬಿದನೂರು ರಸ್ತೆಯ ಕಣಿವೆ ಪ್ರದೇಶದಲ್ಲಿ ವಾಟದಹೊಸಹಳ್ಳಿ ಕೆರೆಗೆ ಹೋಗುವಾಗ ದ್ವಿಚಕ್ರ ವಾಹನ ಅಪಘಾತವಾಗಿದ್ದು, ಸವಾರನ ಎರಡೂ ಕಾಲುಗಳು ಮುರಿದುಕೊಂಡಿದ್ದು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next