Advertisement

Gudibande: ಲಾರಿ ಡಿಕ್ಕಿಯಾಗಿ ಇಬ್ಬರು ಸಾವು

02:54 PM Dec 13, 2023 | Team Udayavani |

ಗುಡಿಬಂಡೆ: ಪಟ್ಟಣದ ಕಣಿವೆಯಲ್ಲಿ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ. 13ರ ಬುಧವಾರ ನಡೆದಿದೆ.

Advertisement

ಗುಡಿಬಂಡೆ ಪಟ್ಟಣದ ಕಡೆಯಿಂದ ಗೌರೀಬಿದನೂರು ಹೋಗುತ್ತಿದ್ದ ಲಾರಿ ಕಣಿವೆಯ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡಿದಿದ್ದು, ನಂತರ ಹಸು ಮೇಯಿಸುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ.

ಘಟನೆ ಪರಿಣಾಮ ಹಸು ಮೇಯಿಸುತ್ತಿದ್ದ ಮಹಿಳೆ ತುಳಸಿ ಬಾಯಿ ಸ್ಥಳದಲ್ಲೇ ಮೃತಪಟ್ಟು, ದ್ವಿಚಕ್ರ ವಾಹನ ಸವಾರ ನಂದೀಶ್ ನಾಯ್ಕ ಗುಡಿಬಂಡೆ ಸಾರ್ವಜನಿಕ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರಿಬ್ಬರು ಗೌರೀಬಿದನೂರು ತಾಲೂಕಿನ ಕೃಷ್ಣರಾಜಪುರ ತಾಂಡ ಗ್ರಾಮದ ವಾಸಿಗಳಾಗಿರುತ್ತಾರೆ ಎಂದು ತಿಳಿದು ಬಂದಿದ್ದು, ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next