Advertisement

Gudibande: ಲಾರಿ ಕೆಳಗೆ ಬಿದ್ದು ಪ್ರಾಣ ಬಿಟ್ಟ ಭಗ್ನಪ್ರೇಮಿ

05:36 PM Apr 10, 2023 | Team Udayavani |

ಗುಡಿಬಂಡೆ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ ಭಗ್ನ ಪ್ರೇಮಿಯೊಬ್ಬ ಲಾರಿ ಕೆಳಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುಡಿಬಂಡೆ ಪೊಲೀಸ್ ಠಾಣ ವ್ಯಾಪ್ತಿಯ ಯರ್ರಲಕ್ಕೇನಹಳ್ಳಿ – ಬೀಚಗಾನಹಳ್ಳಿನ ಕ್ರಾಸ್ ಬಳಿ ನಡೆದಿದೆ.

Advertisement

ತಾಲೂಕಿನ ಬೀಚಗಾನಹಳ್ಳಿ ಗ್ರಾಮದ ಮನೋಹರ್ (20) ಎಂಬ ಯುವಕ ಮೃತಪಟ್ಟವನಾಗಿದ್ದು, ಈತ ಬೀಚಗಾನಹಳ್ಳಿ ಕ್ರಾಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ಓದುತ್ತಿರುವ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪ್ರೀತಿಸುತ್ತಿದ್ದನು ಎಂದು ತಿಳಿದು ಬಂದಿದ್ದು, ಮನೋಹರ್ ಘಟನೆಗೂ ಮುನ್ನ ಶಾಲೆಯ ಬಳಿಗೆ ಹೋಗಿ ಗಲಾಟೆ ಮಾಡಿದ್ದ ಎಂದು ತಿಳಿದು ಬಂದಿದೆ.

ಬೇಸತ್ತು ಹೆದ್ದಾರಿಯಲ್ಲಿ ಲಾರಿಗೆ ಕೆಳಗೆ ಬಿದ್ದು ಮೃತಪಟ್ಟಿದ್ದು, ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next