Advertisement

Gudibande: ತಾಲೂಕು ಕಚೇರಿ ಆವರಣದ ಪಕ್ಕದಲ್ಲೇ ನೀತಿ ಸಂಹಿತೆ ಉಲ್ಲಂಘನೆ

01:09 PM Mar 20, 2024 | Team Udayavani |

ಗುಡಿಬಂಡೆ: ತಾಲೂಕು ಕಚೇರಿ ಆವರಣದ ಪಕ್ಕದಲ್ಲಿರುವ ಇಂದಿರಾ ಕ್ಯಾಂಟಿನ್ ಹೆಸರು ಮತ್ತು ಇಂದಿರಾ ಗಾಂಧಿಯವರ ಭಾವ ಚಿತ್ರವನ್ನು ತೆರವು ಗೊಳಿಸದೇ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನೀತಿ ಸಂಹಿತಿ ಉಲ್ಲಂಘನೆ ಮಾಡಿದ್ದಾರೆ.

Advertisement

ತಾಲೂಕು ಕಚೇರಿ ಆವರಣದಲ್ಲಿರುವ ಸಿದ್ದರಾಮಯ್ಯ ರವರ ಕನಸಿನ ಕೂಸಾದ ಇಂದಿರಾ ಕ್ಯಾಂಟಿನ್ ಬೋರ್ಡ್ ಮತ್ತು ಮಾಜಿ ಪ್ರದಾನಿ ಇಂದಿರಾ ಗಾಂಧಿಯವರ ಚಿತ್ರವನ್ನು ತೆರವುಗೊಳಿಸದೇ ಪ.ಪಂ ಅಧಿಕಾರಿಗಳು ನೀತಿ ಸಂಹಿತ ಉಲ್ಲಂಘನೆ ಮಾಡಿರುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು ದಿನಗಳ ಹಿಂದೆ ಚುನಾವಣಾ ಆಯೋಗವು ಎಲ್ಲಾ ಸಂಬಂಧ ಪಟ್ಟ ಚುನಾವಣಾ ಅಧಿಕಾರಿಗಳಿಗೆ ಯಾವ ಸಮಯದಲ್ಲಿ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು ಎಂಬ ಸುಳಿವನ್ನು ಕೊಟ್ಟು, ಚುನಾವಣೆ ಘೋಷಣೆ ಆಗುತ್ತಿದ್ದಂತೆ 24, 48, 72 ಗಂಟೆಗಳ ಒಳಗೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದರು.

ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದರಿಂದ, ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಚುನಾವಣಾ ಆಯೋಗ ಕ್ರಮ ತೆಗೆದಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next