Advertisement

ಬಾಕಿ ವೇತನಕ್ಕೆ ಅತಿಥಿ ಉಪನ್ಯಾಸಕರ ಆಗ್ರಹ

07:17 AM Jun 26, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಅತಿಥಿ ಉಪನ್ಯಾಸಕರ ಹಾಗೂ ಶಿಕ್ಷಕರ ಬಾಕಿ ಇರುವ ಎಲ್ಲಾ ವೇತನ ಪಾವತಿ ಹಾಗೂ ಲಾಕ್‌ಡೌನ್‌ ನಿಂದಾಗಿ ಸಂಕಷ್ಟದಲ್ಲಿದ್ದು, ಸರ್ಕಾರ ಪರಿಹಾರ ಪ್ಯಾಕೇಜ್‌ ಘೋಷಿಸುವಂತೆ ಆಗ್ರಹಿಸಿ ಗುರುವಾರ ರಾಜ್ಯ ಅತಿಥಿ ಉಪನ್ಯಾಸಕರ ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತಮ್ಮ ಬೇಡಿಕೆಗಳ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು ಹಾಗು ಶಿಕ್ಷಕರು, ಕೂಡಲೇ ಬಾಕಿ ಇರುವ ನಾಲ್ಕೈದುತಿಂಗಳವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಕೋವಿಡ್‌ 19 ಸಂಕಷ್ಟದ ನಡುವೆಯು ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ  ಆನ್‌ಲೈನ್‌ ತರಗತಿ ನಡೆಸುತ್ತಿದ್ದಾರೆ.

ಅನೇಕ ವರ್ಷಗಳಿಂದ ದುಡಿಯುತ್ತಿದ್ದರೂ ಯಾರಿಗೂ ಸೇವಾ ಭದ್ರತೆ ಇಲ್ಲ. ಸರ್ಕಾರ ನೇಮಕಾತಿ ವೇಳೆ ಆದ್ಯತೆ ನೀಡಿ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. ಕೋವಿಡ್‌ 19 ಹಿನ್ನೆಲೆಯಲ್ಲಿ  ಸರ್ಕಾರ ಇತರೆ ವರ್ಗಗಳಿಗೆ ಘೋಷಿಸಿ ರುವಂತೆ ಅತಿಥಿ ಉಪನ್ಯಾಸಕರಿಗೂ ಪರಿಹಾರ ಪ್ಯಾಕೇಜ್‌ ಘೋಷಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಚಿಂತಾಮಣಿಯ ಶಿವಕುಮಾರ್‌, ಮಂಜುನಾಥ,  ಕೃಷ್ಣಮೂರ್ತಿ, ನಂದೀಶ್‌, ಓಬಳರೆಡ್ಡಿ, ಕಾಂತರಾಜು, ಕೃಷ್ಣಮೂರ್ತಿ, ನಾಗೇಂದ್ರಬಾಬು, ಶಿವಶಂಕರ್‌, ರಾಮ ಚಂದ್ರಪ್ಪ, ಮಂಜುನಾಥ, ಜಯಚಂದ್ರ, ನೀಲೂಫ‌ರ್‌ ಸೇರಿದಂತೆ ಜಿಲ್ಲೆಯ ಅತಿಥಿ ಉಪನ್ಯಾಸಕರು, ಶಿಕ್ಷಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next