Advertisement

ಅತಿಥಿ ಉಪನ್ಯಾಸಕರಿಂದ ಮೌಲ್ಯಮಾಪನ ಬಹಿಷ್ಕಾರ ಎಚ್ಚರಿಕೆ

10:53 AM Apr 11, 2017 | Team Udayavani |

ಬೆಂಗಳೂರು: ಸೇವಾ ಭದ್ರತೆ ಸೇರಿದಂತೆ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಮಾತುಕತೆಗೆ ಆಹ್ವಾನ ನೀಡದಿದ್ದರೆ ಪರೀಕ್ಷಾ ಚಟುವಟಿಕೆ ಹಾಗೂ ಮೌಲ್ಯಮಾಪನ ಕಾರ್ಯದಿಂದ ದೂರ ಉಳಿಯುವುದಾಗಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಎಚ್ಚರಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಬಿ.ರಾಜಶೇಖರಮೂರ್ತಿ, ಧರಣಿ ವೇಳೆ ಸಮಸ್ಯೆ ಬಗೆಹರಿಸಲು ಸಮಯ ಕೊಡುವಂತೆ ಸಚಿವರು ಮನವಿ ಮಾಡಿದ್ದರು. ಅವರ ಮಾತಿಗೆ ಗೌರವ ಕೊಟ್ಟು ಧರಣಿ ಕೈಬಿಟ್ಟಿದ್ದೆವು. ಆದರೆ ಈಗ ನಮ್ಮನ್ನು ಕೇಳ್ಳೋರಿಲ್ಲ.

Advertisement

ಮುಖ್ಯಮಂತ್ರಿಯವರಿಗೆ ಬದ್ಧತೆ, ಕಾಳಜಿ, ಜವಾಬ್ದಾರಿ ಇದ್ದರೆ ಕೂಡಲೇ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ನಮ್ಮನ್ನು ಮಾತುಕತೆಗೆ ಆಹ್ವಾನಿಸಿ ಸಮಸ್ಯೆ ನಿವಾರಿಸಬೇಕು. ಇಲ್ಲದಿದ್ದರೆ ಮೌಲ್ಯಮಾಪನ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವರ್ಷದ ಮಾಸಿಕ ವೇತನ ಇನ್ನೂ ಬಿಡುಗಡೆ ಮಾಡಿಲ್ಲ. ಉನ್ನತ ಶಿಕ್ಷಣ ಸಚಿವ ಸ್ಥಾನದಲ್ಲಿ ಮುಂದುವರಿಯಲು ಅನರ್ಹರಾಗಿದ್ದಾರೆ. ತಕ್ಷಣವೇ ಸಭೆ ಕರೆದು ಸೇವಾ ಹಿರಿತನ, ವಯೋಮಿತಿ ಆಧಾರ
ಪರಿಗಣಿಸಿ ಸೇವಾ ಭದ್ರತೆ ಕಲ್ಪಿಸಿ ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next