Advertisement

ತೌಕ್ತೆ ಚಂಡಮಾರುತದಿಂದ ಹಾನಿ: ಮೀನುಗಾರರಿಗೆ 105 ಕೋಟಿ ರೂ. ಪ್ಯಾಕೇಜ್ ಘೋಷಣೆ: ಗುಜರಾತ್

04:07 PM Jun 02, 2021 | Team Udayavani |

ನವದೆಹಲಿ: ಕಳೆದ ತಿಂಗಳು ತೌಕ್ತೆ ಚಂಡಮಾರುತದಿಂದ ಸಂಭವಿಸಿದ ಹಾನಿಯ ಹಿನ್ನೆಲೆಯಲ್ಲಿ ಮೀನುಗಾರರಿಗೆ 105 ಕೋಟಿ ರೂಪಾಯಿ ಆರ್ಥಿಕ ನೆರವಿನ ಪ್ಯಾಕೇಜ್ ಅನ್ನು ಪಶ್ಚಿಮಬಂಗಾಳ ಸರ್ಕಾಆರ ಬುಧವಾರ(ಜೂನ್ 02) ಘೋಷಿಸಿದೆ.

Advertisement

ಇದನ್ನೂ ಓದಿ:ನೀರು ಸರಬರಾಜು ಇಳಿಸುವ ವೇಳೆ ಸುಪರ್ ವೈಸರ್ ಮೇಲೆ ಬಿದ್ದ ಪೈಪ್: ಗಾಯಗೊಂಡ ಸುಪರ್ ವೈಸರ್ ಸಾವು

ತೌಕ್ತೆ ಚಂಡಮಾರುತದಿಂದ ಸಂಭವಿಸಿದ ನಷ್ಟದ ಪುನರ್ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ ವಿಜಯ್ ರೂಪಾನಿ ಈ ಆರ್ಥಿಕ ಪ್ಯಾಕೇಜ್ ಘೋಷಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೇ 17ರ ರಾತ್ರಿ ಗುಜರಾತ್ ಕರಾವಳಿ ಪ್ರದೇಶದ ಮೇಲೆ ಗಂಟೆಗೆ 220 ಕಿಲೋ ಮೀಟರ್ ವೇಗದಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸಿತ್ತು. ಇದರ ಪರಿಣಾಮವಾಗಿ ಸಣ್ಣ ದೋಣಿ, ಬಲೆ ಸೇರಿದಂತೆ ಅಪಾರ ಪ್ರಮಾಣದ ನಷ್ಟ ಸಂಭವಿಸಿತ್ತು.

ಗುಜರಾತ್ ನ ಜಫ್ರಾಬಾದ್, ರಾಜುಲಾ, ಸೈಯದ್ ರಾಜ್ ಪಾರಾ, ಶಿಯಾಲ್ ಬೆಟ್ ಮತ್ತು ನವಬಂದರು ಪ್ರದೇಶಗಳಲ್ಲಿ ಚಂಡಮಾರುತ ತೌಕ್ತೆ ಅಪಾರ ಹಾನಿಯನ್ನು ಉಂಟು ಮಾಡಿತ್ತು. ಚಂಡಮಾರುತದಿಂದ ಹಾನಿಗೊಳಗಾದ ಸಣ್ಣ ಮತ್ತು ದೊಡ್ಡ ಪ್ರಮಾಣದ ದೋಣಿಗಳಿಗೆ ಒಂದು ಸಾವಿರ ರೂಪಾಯಿಗಿಂತ ಹೆಚ್ಚು ಪರಿಹಾರ ನೀಡಲಾಗುವುದು ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next