Advertisement

ದುಬಾರಿ ದಂಡ : ಕರ್ನಾಟಕದಲ್ಲೂ ಗುಜರಾತ್ ಮಾದರಿ ದಂಡ ಇಳಿಕೆ ?

06:25 PM Sep 11, 2019 | sudhir |

ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿ ವಿಧಿಸುತ್ತಿದ್ದ ದುಬಾರಿ ದಂಡವನ್ನು ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲಿಯೂ ದಂಡ ಪ್ರಮಾಣ ಇಳಿಕೆ ಮಾಡುವ ಕುರಿತು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಈಗಾಗಲೇ ಸಂಚಾರ ನಿಯಮ ಉಲ್ಲಂಘಿಸಿ ದೇಶದೆಲ್ಲೆಡೆ ದುಬಾರಿ ದಂಡ ಪಾವತಿಸಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ, ಇದಕ್ಕೆ ಸಂಬಂಧಿಸಿ ಗುಜರಾತ್ ಸರಕಾರ ದುಬಾರಿ ದಂಡದಿಂದ ತೊಂದರೆ ತಪ್ಪಿಸಲು ದಂಡ ಪ್ರಮಾಣವನ್ನು ಇಳಿಕೆ ಮಾಡಿದೆ.

ಹಾಗಾಗಿ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರೀಶಿಲನೆ ನಡೆಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next