Advertisement
ಗುಜರಾತ್ನ ವಡೋದರಾ ಜಿಲ್ಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಯುವ ಸಮಾವೇಶದಲ್ಲಿ ವರ್ಚುವಲ್ ಆಗಿ ಪಾಲ್ಗೊಂಡು ಮಾತನಾಡಿದ ಅವರು, ಭಾರತವು ತನ್ನ ಪ್ರಾಚೀನ ಸಂಪ್ರದಾಯಗಳನ್ನು ಉಳಿಸಿಕೊಂಡೇ ಪ್ರಗತಿಪರ ಅಸ್ಮಿತೆಯನ್ನು ಹೊಂದಬೇಕು. ಈಗ ಜಗತ್ತಿನ ಸಮಸ್ಯೆಗಳಿಗೆ ಭಾರತವೇ ಪರಿಹಾರ ಸೂಚಿಸುವಂತಾಗಿದೆ. ಕೊರೊನಾ ಸೋಂಕಿನ ಅವಧಿಯಲ್ಲಿ ಜಗತ್ತಿಗೆ ಲಸಿಕೆಗಳು ಮತ್ತು ಔಷಧಗಳ ವಿತರಣೆಯಿಂದ ಹಿಡಿದು, ಪೂರೈಕೆ ಸರಪಳಿಯು ಅಸ್ತವ್ಯಸ್ತಗೊಂಡಿರುವ ಸಮಯದಲ್ಲಿ ಆತ್ಮನಿರ್ಭರ ಭಾರತ ನಿರ್ಮಿಸುವವರೆಗೆ, ಜಾಗತಿಕ ಅಶಾಂತಿಯ ನಡುವೆಯೇ ಶಾಂತಿ ಕಾಪಾಡುವಂಥ ದೇಶವನ್ನು ನಿರ್ಮಿಸುವವರೆಗೆ ಭಾರತವು ಇಂದು ಇಡೀ ಜಗತ್ತಿಗೆ ಹೊಸ ಆಶಾಕಿರಣವಾಗಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.
Advertisement
ಸಂಘರ್ಷದ ನಡುವೆ ಶಾಂತಿ ಪಸರಿಸುವ ನವ ಭಾರತ ನಿರ್ಮಾಣ ಮಾಡಿ : ಯುವಜನತೆಗೆ ಪ್ರಧಾನಿ ಮೋದಿ ಕರೆ
09:39 PM May 19, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.