Advertisement

ದೇವಸ್ಥಾನದಲ್ಲಿದ್ದ ಪತ್ನಿಯನ್ನು ಕರೆದೊಯ್ಯಲು ಬಂದ ಬಿಜೆಪಿ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

04:56 PM May 08, 2023 | Team Udayavani |

ಗುಜರಾತ್: ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಪತ್ನಿಯನ್ನು ಕರೆದೊಯ್ಯಲು ಬಂದ ಬಿಜೆಪಿ ಕಾರ್ಯಕರ್ತನನ್ನು ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆಗೈದ ಘಟನೆ ಗುಜರಾತ್ ನ ವಲ್ಸದ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

Advertisement

ಮೃತ ಶೈಲೇಶ್ ಪಟೇಲ್ (45) ಬಿಜೆಪಿಯ ವಾಪಿ ತಾಲೂಕು ಘಟಕದ ಉಪಾಧ್ಯಕ್ಷರಾಗಿದ್ದರು. ಇವರು ಕೋಚರ್ವ ಗ್ರಾಮದ ನಿವಾಸಿಯಾಗಿದ್ದರು ಎನ್ನಲಾಗಿದ್ದು.

ರಾಟಾ ರಸ್ತೆಯಲ್ಲಿರುವ ಮಹಾದೇವ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿದ್ದ ಪತ್ನಿ ನಯಾಬೆನ್‌ಗಾಗಿ ಶೈಲೇಶ್ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ
ದೇವಸ್ಥಾನದ ಹೊರಗೆ ಕಾಯುತ್ತಿದ್ದರು, ಆಗ ಬೈಕಿನಲ್ಲಿ ದುಷ್ಕರ್ಮಿಗಳು ಶೈಲೇಶ್ ಎದೆಗೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಕೂಡಲೇ ಸ್ಥಳೀಯರು ಶೈಲೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಹೇಳಿಕೆ ನೀಡಿದ ಶೈಲೇಶ್ ಪತ್ನಿ ಕೆಲವು ಪರಿಚಿತ ವ್ಯಕ್ತಿಗಳೊಂದಿಗಿನ ಹಳೆಯ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದು ಆರೋಪಿಸಿದ್ದಾರೆ.
ಆರೋಪಿಗಳ ಪತ್ತೆಗೆ ಪೊಲೀಸರು ಗಡಿ ಭಾಗದಲ್ಲಿ ನಾಕಾಬಂಧಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ”ಬಂಗಾಳದಲ್ಲಿ ಏನಾದರೂ ಆದರೆ…”: ಮಣಿಪುರ ಗಲಭೆ ಕುರಿತು ಕೇಂದ್ರದ ವಿರುದ್ಧ ಮಮತಾ ಆಕ್ರೋಶ

Advertisement
Advertisement

Udayavani is now on Telegram. Click here to join our channel and stay updated with the latest news.

Next