Advertisement

ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ : ಕಿಟಕಿ ಗಾಜಿಗೆ ಹಾನಿ

12:21 PM Nov 08, 2022 | Team Udayavani |

ಗುಜರಾತ್ : ಗುಜರಾತ್ ಚುನಾವಣೆಗೆ ಪ್ರತಿ ಪಕ್ಷವೂ ತನ್ನ ತಯಾರಿಯಲ್ಲಿ ನಿರತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಸಾದುದ್ದೀನ್ ಓವೈಸಿ ಅವರು ಗುಜರಾತ್ ವಿಧಾನಸಭಾ ಚುನಾವಣೆಗೆ ಪ್ರವಾಸ ಕೈಗೊಂಡಿದ್ದಾರೆ. ಈ ನಡುವೆ ಸೋಮವಾರ ಓವೈಸಿ ಹೋಗುತ್ತಿದ್ದ ರೈಲಿನ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿ ಬರುತ್ತಿದೆ. ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Advertisement

ಎಐಎಂಐಎಂ ವಕ್ತಾರ ವಾರಿಸ್ ಪಠಾಣ್, “ಅಸಾದುದ್ದೀನ್ ಓವೈಸಿ ಅಹಮದಾಬಾದ್‌ನಿಂದ ಸೂರತ್‌ಗೆ ವಂದೇ ಭಾರತ್ ರೈಲಿನಲ್ಲಿ ಹೋಗುತ್ತಿದ್ದರು. ಸೂರತ್‌ಗೆ ಸುಮಾರು 20-25 ಕಿಮೀ ದೂರದಲ್ಲಿರುವಾಗ ಅಪರಿಚಿತರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವಾರಿಸ್ ಪಠಾಣ್ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಎಐಎಂಐಎಂ ಕೂಡ ಗುಜರಾತ್‌ನಲ್ಲಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಪಕ್ಷವು ಅಹಮದಾಬಾದ್‌ನಲ್ಲಿ ಮೂರು ಮತ್ತು ಸೂರತ್‌ನಲ್ಲಿ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಶೀಘ್ರದಲ್ಲೇ ಗುಜರಾತ್‌ನಲ್ಲಿ 182 ಸದಸ್ಯ ಬಲದ ವಿಧಾನಸಭೆಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಡಿಸೆಂಬರ್ 1 ರಂದು 89 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅದೇ ಸಮಯದಲ್ಲಿ ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ 92 ಸ್ಥಾನಗಳಿಗೆ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಚುನಾವಣೆಯ ಮತ ಎಣಿಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next