Advertisement

ತೋತಾಪುರಿ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್‌

02:10 PM Feb 28, 2022 | Team Udayavani |

ನವರಸ ನಾಯಕ ಜಗ್ಗೇಶ್‌ ನಟನೆಯ ತೋತಾಪುರಿ ಚಿತ್ರದ ಹಾಡಿಗೆ ದೇಶ-ವಿದೇಶದಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. “ಬಾಗ್ಲು ತೆಗಿ ಮೇರಿ ಜಾನ್‌’ ಹಾಡು ಬಿಡುಗಡೆಯಾದಾಗಿನಿಂದಲೂ ಸಖತ್‌ ಸದ್ದು ಮಾಡುತ್ತಿದೆ. ದೇಶ ಮಾತ್ರವಲ್ಲದೇ ವಿದೇಶದಿಂದಲೂ ಈ ಹಾಡನ್ನು ಮೆಚ್ಚಿಕೊಂಡಿದ್ದು “ತೋತಾಪುರಿ’ ಹೆಚ್ಚುಗಾರಿಕೆ.

Advertisement

ಇತ್ತೀಚೆಗಷ್ಟೇ ಅಮೆರಿಕಾ ನೆರೆಹೊರೆಯ ರಾಷ್ಟ್ರದ ಅನಿವಾಸಿ ಕನ್ನಡಿಗರೊಂದಿಗೆ ವರ್ಚುವಲ್‌ ಮಾತುಕತೆ ನಡೆಸಿದ್ದ ಜಗ್ಗೇಶ್‌, ಇದೀಗ ಗಲ್ಫ್ ಕನ್ನಡಿಗರೊಂದಿಗೂ “ತೋತಾಪುರಿ’ ಬಗ್ಗೆ ವಿಶೇಷವಾಗಿ ವಿಷಯ ಹಂಚಿಕೊಂಡಿದ್ದಾರೆ.

“ತೋತಾಪುರಿ’ ಚಿತ್ರದ ಹಾಡು, ಮೇಕಿಂಗ್‌ ಹಾಗೂ ತಂಡದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡಿರುವ ಜಗ್ಗೇಶ್‌, ಈ ಸಿನಿಮಾಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡರು. ಇನ್ನು “ಬಾಗ್ಲು ತೆಗಿ ಮೇರಿ ಜಾನ್‌’ಗೆ ದುಬೈ ಕನ್ನಡಿಗರಿಂದ ಪ್ರಶಂಸೆಗಳ ವ್ಯಕ್ತವಾಗಿದ್ದು, ಈ ಕಾರ್ಯಕ್ರಮದ ವಿಶೇಷ. ಈಗಾಗಲೇ ಮಿಲಿಯನ್‌ಗಟ್ಟಲೇ ಹಿಟ್ಸ್‌ ದಾಖಲಿಸಿರುವ ಈ ಚಿತ್ರದ ಹಾಡಿಗೆ ಎಲ್ಲರೂ ತಲೆದೂಗಿಸುತ್ತಿದ್ದಾರೆ.

ಇದನ್ನೂ ಓದಿ:ತವರು ಮನೆಯ ಆಸ್ತಿಗಾಗಿ ಕಿರುಕುಳ: ಪತ್ನಿ ನಗ್ನ ಫೋಟೋ ಸೆರೆಹಿಡಿದು ಪತಿಯಿಂದ ಬ್ಲ್ಯಾಕ್ ಮೇಲ್

“ನೀರ್‌ ದೋಸೆ’ ಖ್ಯಾತಿಯ ವಿಜಯ ಪ್ರಸಾದ್‌ ನಿರ್ದೇಶಿಸಿರುವ “ತೋತಾಪುರಿ’ ಚಿತ್ರಕ್ಕೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ. ಮೋನಿಫಿಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕೆ.ಎ.ಸುರೇಶ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎರಡು ಭಾಗಗಳಲ್ಲಿ ತೋತಾಪುರಿ ತೆರೆಕಾಣಲಿದ್ದು, ಸದ್ಯದಲ್ಲೇ ಭಾಗ-1 ಬಿಡುಗಡೆಯಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next