Advertisement

ಗುಂಡ್ಲುಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

01:24 PM Jul 10, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

Advertisement

ತಾಲೂಕಿನ ಕಬ್ಬಹಳ್ಳಿ ಗ್ರಾಮದ ನಿವಾಸಿ ಮಣಿಕಂಠ ಎಂಬಾತ ಬಂಧಿತ ಆರೋಪಿ.

ಮಣಿಕಂಠ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಿತ್ತಿದ್ದಾನೆಂದು ಖಚಿತ ಮಾಹಿತಿ ಮೇರೆಗೆ ಬೇಗೂರು ಪಿಎಸ್ಐ ಜಗದೀಶ್ ಧೂಳಶೆಟ್ಟಿ ನೇತೃತ್ವದಲ್ಲಿ ಪ್ರದೀಪ್, ಗಣೇಶ್, ನಾಗೇಂದ್ರ, ಶಿವಕುಮಾರ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Update: ಕಾಣಿಯೂರು- ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ!: ಮೂವರು ನಾಪತ್ತೆ

ಬಂಧಿತನಿಂದ 4 ಗಾಂಜಾ ಗಿಡ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next