Advertisement

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

09:40 PM Jul 18, 2024 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ): ಜಮೀನನಲ್ಲಿ ಹಂದಿಗಳ ಬೇಟೆಗೆ ಇಟ್ಟಿದ್ದ ನಾಡ ಸಿಡಿಮದ್ದು ಸಿಡಿದು ಕರಡಿ ಸಾವಿಗೀಡಾದ ಘಟನೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದ ವ್ಯಾಪ್ತಿಯ ಕಾಡಂಚಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ.

Advertisement

ಹೊರೆಯಾಲ ಗ್ರಾಮದ ಮಹದೇವಪ್ಪ ಎಂಬುವವರಿಗೆ ಸೇರಿದ ಕಬ್ಬಿನ ತೋಟದಲ್ಲಿ ಸಿಡಿಮದ್ದು ಇಡಲಾಗಿತ್ತು. ಇದನ್ನು ತಿನ್ನಲು ಹೋಗಿದ್ದ 6 ವರ್ಷದ ಗಂಡು ಕರಡಿಯ ಬಾಯಿಯಲ್ಲಿ ಸಿಡಿದು ಸ್ಥಳದಲ್ಲಿಯೇ  ಮೃತಪಟ್ಟಿದೆ. ವಿಷಯ ತಿಳಿದ ಓಂಕಾರ್ ವಲಯದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಮರಣೋತ್ತರ ಪರೀಕ್ಷೆ ನಡೆಸಿ ಕರಡಿಯ ಕಳೇಬರವನ್ನು ಸುಟ್ಟು ಹಾಕಲಾಯಿತು ಎಂದು ಓಂಕಾರ್ ವಲಯದ ಆರ್.ಎಫ್.ಒ ಸತೀಶ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಜಮೀನು ಮಾಲೀಕ ತಲೆಮರೆಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next