Advertisement

Gundlupete: ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸಾವು

02:12 PM Jan 30, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

Advertisement

ಮಡಹಳ್ಳಿ ಗ್ರಾಮದ ಮಾದಪ್ಪ(53) ಮೃತ ವ್ಯಕ್ತಿ.

ಈತ ಮಡಹಳ್ಳಿಯ ಚೇತನ ಎಂಬವರ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ತಿರುವಿನಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರಾಕ್ಟರ್ ಕೆಳಗೆ ಚಾಲಕ ಸಿಲುಕಿ ಹಾಕಿಕೊಂಡ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಮಾಹಿತಿ ಅರಿತ ಸುತ್ತಮುತ್ತಲ ಜಮೀನು ಮಾಲೀಕರು ಹಾಗೂ ರೈತರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಚಾಲಕನನ್ನು ಟ್ರ್ಯಾಕ್ಟರ್ ನಿಂದ ಹೊರ ತೆಗೆದರು ಕೂಡ ಯಾವುದೇ ಪ್ರಯೋಜನವಾಗಲಿಲ್ಲ.

ಘಟನೆಉ ಕುರಿತು ತಿಳಿದು ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಚಾಲಕನ ಮೃತ ದೇಹವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಂತರ ಟ್ರಾಕ್ಟರ್ ಅನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next