Advertisement

Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಸಾವು

01:36 PM Sep 03, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಕೌಟುಂಬಿಕ ಕಲಹದಿಂದ ಯುವಕನೋರ್ವ ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ  ಸಾವನ್ನಪ್ಪಿರುವ ಘಟನೆ ಸೆ.3ರ ಭಾನುವಾರ ನಡೆದಿದೆ.

Advertisement

ತಾಲೂಕಿನ ಕೋಡಹಳ್ಳಿ ಗ್ರಾಮದ ಗುಡ್ಡಮಾದ ಶೆಟ್ಟಿ ಹಾಗೂ ಭಾಗ್ಯ ಎಂಬವರ ಪುತ್ರ ಸ್ವಾಮಿ(23) ಮೃತ ಯುವಕ.

ಈತ ಶನಿವಾರ ಮನೆಯವರೊಂದಿಗೆ ಕುಡಿದು ಜಗಳವಾಡಿದ ಎನ್ನಲಾಗುತ್ತಿದ್ದು, ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಲ್ಲುಕಟ್ಟೆ ಜಲಾಶಯದಲ್ಲಿ ಭಾನುವಾರ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ‌ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿ ನಂತರ ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು‌ ಸುಮಾರು ಎರಡು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಜಲಾಶಯದಿಂದ ಶವವನ್ನು ಮೇಲೆತ್ತಿದರು.

ಮೃತ ದೇಹವನ್ನು ಪಟ್ಟಣದ ಸಾರ್ವಜನಿಕರು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಸಿದಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next