Advertisement

Gundlupete; ಜಾನುವಾರು ಅಕ್ರಮ ಸಾಗಣೆ: ಮೂವರ ಬಂಧನ

06:53 PM Aug 29, 2024 | Team Udayavani |

ಗುಂಡ್ಲುಪೇಟೆ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಪಿಕ್ ಅಪ್ ವಾಹನದಲ್ಲಿ ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಜಾನುವಾರುಗಳನ್ನು ವಶಕ್ಕೆ ಪಡೆದಿರುವ ಘಟನೆ ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತಮಿಳುನಾಡಿನ ಮಸಣಿಗುಡಿಯ ವಿಜಯ್(29), ನವೀನ್(32), ನಂದಗೋಪಾಲ್(22) ಬಂಧಿತ ಆರೋಪಿಗಳು.

ತೆರಕಣಾಂಬಿ ಠಾಣೆ ಸಬ್ ಇನ್ಸ್ ಪೆಕ್ಟರ್ ಮಹೇಶ್ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಬಲಚವಾಡಿ ಕಡೆಯಿಂದ ತೆರಕಣಾಂಬಿಹುಂಡಿ ಮಾರ್ಗವಾಗಿ ತಮಿಳುನಾಡಿನ ಕಸಾಯಿ ಖಾನೆಗೆ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಜಾನುವಾರುಗಳ ಸಮೇತ ಮೂವರನ್ನು ಬಂಧಿಸಲಾಗಿದೆ. ದಾಳಿಯಲ್ಲಿ ಮೂರು ಕರುಗಳು ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದಾಳಿಯಲ್ಲಿ ತೆರಕಣಾಂಬಿ ಠಾಣೆ ಪೇದೆಗಳಾದ ಬಂಗಾರನಾಯಕ, ಭಗಿರಥ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next