Advertisement

Gundlupete;ಕಾರು ಢಿಕ್ಕಿಯಾಗಿ ಸೈಕಲ್ ಸವಾರ ದುರ್ಮರಣ

07:07 PM Dec 29, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಕಾರು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕಗ್ಗಳದಹುಂಡಿ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಬಳಿ ಶುಕ್ರವಾರ ನಡೆದಿದೆ.

Advertisement

ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದ ನಾಗೇಂದ್ರ(27) ಮೃತ ಯುವಕ. ಈತ ಕಗ್ಗಳದಹುಂಡಿಯಿಂದ ಸೈಕಲ್ ನಲ್ಲಿ ಮಧ್ಯಾಹ್ನದ ಊಟ ತೆಗೆದುಕೊಂಡು ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಗುದ್ದಿದೆ. ಘಟನೆಯಲ್ಲಿ ತಲೆಗೆ ತೀವ್ರಪೆಟ್ಟಾಗಿ ನಾಗೇಂದ್ರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಮಾಹಿತಿ ಅರಿತ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದು, ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next