Advertisement

ಗುಂಡ್ಲುಪೇಟೆ: ಸಾಲದ ಕಿರುಕುಳದಿಂದ ಬೇಸತ್ತು ರೈತ ಆತ್ಮಹತ್ಯೆ

03:36 PM Oct 18, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಟ್ರ್ಯಾಕ್ಟರ್ ಸಾಲ ತೆಗೆದುಕೊಂಡಿದ್ದ ರೈತನೋರ್ವ ಖಾಸಗಿ ಫೈನಾನ್ಸ್ ಕಿರುಕುಳದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ನಡೆದಿದೆ.

Advertisement

ನೇನೆಕಟ್ಟೆ ಗ್ರಾಮದ ಕೃಷ್ಣಯ್ಯ (62) ಮೃತಪಟ್ಟ ರೈತ.

ಈತ ಖಾಸಗಿ ಫೈನಾನ್ಸ್ ವೊಂದರಲ್ಲಿ ಟ್ಯ್ರಾಕ್ಟರ್ ಸಾಲ ತೆಗೆದುಕೊಂಡಿದ್ದ ಎನ್ನಲಾಗುತ್ತಿದ್ದು, ಫೈನಾನ್ಸ್ ನವರ ಕಿರುಕುಳ ತಾಳಲಾರದೆ ಅ.17ರ ಸೋಮವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಇವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ

ಈ ಪ್ರಕರಣದ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next