Advertisement

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

03:01 PM Jun 24, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ನೇಣು ಬಿಗಿದುಕೊಂಡು ಖಾಸಗಿ ಫೈನಾನ್ಸ್ ಸಿಬ್ಬಂದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ.

Advertisement

ನಂಜನಗೂಡು ತಾಲೂಕಿನ ನಾಗಣಾಪುರ ಗ್ರಾಮದ ಅಭಿಷೇಕ್(23) ಮೃತ ಯುವಕ. ಈತ ಖಾಸಗಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ಯಾರು ಇಲ್ಲದ ವೇಳೆ ರಾತ್ರಿ ಕಚೇರಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಂತರ ಮಾಹಿತಿ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ವಶಕ್ಕೆ ಪಡೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Advertisement
Advertisement

Udayavani is now on Telegram. Click here to join our channel and stay updated with the latest news.

Next