Advertisement

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

05:40 PM Oct 17, 2024 | Team Udayavani |

ಗುಂಡ್ಲುಪೇಟೆ: ಕಳೆದ 3 ತಿಂಗಳಿಂದ ರೈತರಿಗೆ ಉಪಟಳ ಕೊಡುತ್ತಿದ್ದ ಗಂಡು ಚಿರತೆ ಕೊನೆಗೂ ಬೋನಿಗೆ ಸೆರೆಯಾಗಿರುವ ಘಟನೆ ಕುಲಗಾಣ ಗ್ರಾಮದಲ್ಲಿ ಗುರುವಾರ (ಅ.17) ನಡೆದಿದೆ.

Advertisement

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಲಗಾಣ ಗ್ರಾಮದ ಬಾಬು ಅಯ್ಯಂಗಾರ್ ಎಂಬುವವರ ಜಮೀನಿನಲ್ಲಿ ನಾಯಿ ಕಟ್ಟಿ ಬೋನನ್ನು ಇರಿಸಲಾಗಿತ್ತು. ಆಹಾರ ಅರಸಿ ಬಂದ ಚಿರತೆಯು ನಾಯಿ ಆಸೆಗೆ ಬೋನಲ್ಲಿ ಸೆರೆಯಾಗಿದೆ. ಚಾಮರಾಜನಗರ ಬಫರ್ ವಲಯ ವ್ಯಾಪ್ತಿಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆಯನ್ನು ಬೇರೆಡೆಗೆ ರವಾನಿಸಿದ್ದಾರೆ. ಸೆರೆಯಾದ ಚಿರತೆ ಗಂಡಾಗಿದ್ದು, ಸುಮಾರು 5 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.

ನಿಟ್ಟುಸಿರು ಬಿಟ್ಟ ರೈತರು: ಸೀಗೆವಾಡಿ ಕುಲಗಾಣ ಗ್ರಾಮದ ಸುತ್ತಮುತ್ತಲು ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿತ್ತು. ಇದರಿಂದ ರೈತರು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುವಂತಾಗಿತ್ತು. ಇದರಿಂದ ಬೇಸತ್ತಿದ್ದ ರೈತರ ಮನವಿ ಮೇರೆಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಇದರಿಂದ ಈ ಭಾಗದ ರೈತರು ನಿಟ್ಟುಸಿರು ಬಿಡುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next