Advertisement

ಗುಂಡ್ಲುಪೇಟೆ: ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

07:32 PM Dec 03, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವಪುರ ಕಲ್ಲುಕಟ್ಟೆ ಜಲಾಶಯದಲ್ಲಿ ಶನಿವಾರ ಸಂಜೆ ನಡೆದಿದೆ.

Advertisement

ಅಣ್ಣೂರುಕೇರಿ ಗ್ರಾಮದ ಯುವಕ ಮಾಧು(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಕೆರೆಗೆ ಬಿದ್ದು ಸಾಯುತ್ತಿದ್ದೇನೆ ಎಂದು ಕೆರೆಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಮೊಬೈಲ್ ಕಲ್ಲುಕಟ್ಟೆ ಜಲಾಶಯದ ಏರಿ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ಬರಮಾಡಿಕೊಂಡು ಶವ ಮೇಲೆತ್ತಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ‌ವಿದ್ಯಾಥಿ೯ ನೀರಿನಲ್ಲಿ ಮುಳುಗಿ ಸಾವು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next