Advertisement

ಗುಂಡ್ಲುಪೇಟೆ: ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮ ಮದ್ಯ ಶೇಖರಣೆ: ಓರ್ವನ ಬಂಧನ

09:26 AM Jan 12, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿರುವ ಘಟನೆ ತಾಲೂಕಿನ ಬಂಡೀಪುರ ಕಾಡಂಚಿನ ಎಲಚಟ್ಟಿ ಗ್ರಾಮದಲ್ಲಿ ನಡೆದಿದೆ.

Advertisement

ಎಲಚಟ್ಟಿ ಗ್ರಾಮದ ಕುಮಾರ್ ಬಂಧಿತ ಆರೋಪಿ.

ಈತ ತನ್ನ ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಶೇಖರಿಸಿಟ್ಟು ಹೆಚ್ಚಿನ ಬೆಲೆಗೆ ಬಂಡೀಪುರ ಕಾಡಂಚಿನಲ್ಲಿರುವ ಹಾಡಿ ಹಾಗೂ ಗಿರಿಜನ ಕಾಲೋನಿ ಜನರಿಗೆ ಮಾರಾಟ ಮಾಡುತ್ತಿದ್ದ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ತನ್ವೀರ್ ನೇತೃತ್ವದಲ್ಲಿ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಿ, ಅಕ್ರವಾಗಿ ಶೇಖರಿಸಿಟ್ಟಿದ್ದ ವಿವಿದ ಬ್ರಾಂಡ್ ಗಳ ಸುಮಾರು 2 ಲೀಟರ್ ಗೂ ಅಧಿಕ ಮದ್ಯದ ಪೌಚ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next