Advertisement

ಗುಂಡ್ಲುಪೇಟೆ : ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು

04:34 PM May 29, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯ ಚಿಕ್ಕಾಟಿ ಗೇಟ್ ಬಳಿ ನಡೆದಿದೆ.

Advertisement

ಚಿಕ್ಕಾಟಿ ಗ್ರಾಮದ ಕುಮಾರಸ್ವಾಮಿ (55) ಸ್ಥಳದಲ್ಲೇ ಸಾವನ್ನಪ್ಪಿರುವ ವ್ಯಕ್ತಿ. ಮಲಿಯೂರು ಗ್ರಾಮದ ಗಿರೀಶ್(42) ತೀವ್ರ ಗಾಯಗೊಂಡಿದ್ದು, ಬೇಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಿಕ್ಕಾಟಿ ಗ್ರಾಮದ ಕುಮಾರಸ್ವಾಮಿ ಬೇಗೂರಿನಲ್ಲಿ ಮನೆಗೆ ಸಾಮಾನು ತೆಗೆದುಕೊಂಡು ತೆರಳುತ್ತಿದ್ದ ವೇಳೆ ನಂಜನಗೂಡಿನ ಕಡೆಯಿಂದ ವೇಗವಾಗಿ ಬರುತ್ತಿದ್ದ ಗಿರೀಶ್ ಎಂಬುವವರ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಕುಮಾರಸ್ವಾಮಿ ಸ್ಥಳದಲ್ಲೆ ಸಾವನ್ನಪ್ಪಿದ್ಧಾರೆ. ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿ ಮೃತ ದೇಹವನ್ನು ಬೇಗೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಐಪಿಎಲ್ ಫೈನಲ್: ಯಾವ ತಂಡಕ್ಕೆ ಎಷ್ಟು ಹಣ ಸಿಗಲಿದೆ? ಆರ್ ಸಿಬಿಗೆ ಸಿಗುವ ಮೊತ್ತವೆಷ್ಟು?

Advertisement

ಚತುಸ್ಪಥ ರಸ್ತೆ ನಿರ್ಮಾಣಕ್ಕೆ ಒತ್ತಾಯ : ಗುಂಡ್ಲುಪೇಟೆ ತಾಲೂಕು ಕೇರಳ, ತಮಿಳುನಾಡು ರಾಜ್ಯದ ಗಡಿ ಹಂಚಿಕೊಂಡಿರುವ ಹಿನ್ನಲೆ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಜೊತೆಗೆ ಅತೀವೇಗ, ರಸ್ತೆ ದಿಬ್ಬ, ಮಾರ್ಗಸೂಚಿ ನಾಮಫಲಕ ಅಳವಡಿಕೆ ಮಾಡದ ಕಾರಣ ಅಪಘಾತ ಪ್ರಕರಣಗಳು ಅಧಿಕವಾಗುತ್ತಿದೆ. ಈ ಬಗ್ಗೆ ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್ ಹಾಗು ಉಸ್ತುವಾರಿ ಸಚಿವ ವಿ.ಸೋಮಣ್ಣ ಚತುಸ್ಪಥ ರಸ್ತೆ ನಿರ್ಮಾಣ ಮಾಡಲು ಮುಂದಾಗಬೇಕೆಂದು ವಾಹನ ಸವಾರರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next