Advertisement

Gundlupete ; ಏಕಾಏಕಿ ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಮೃತ್ಯು

05:10 PM Aug 09, 2023 | Team Udayavani |

ಗುಂಡ್ಲುಪೇಟೆ: ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

Advertisement

ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್(15) ಮೃತ ದುರ್ದೈವಿ. ಈಕೆ ವಾಯು ವಿಹಾರ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ವೈದ್ಯರು ತಪಾಸಣೆ ನಡೆಸಿದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಧೃಡಪಟ್ಟಿದೆ.

ಫಿಲಿಶ್ ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದು, ತಂದೆ ಪ್ರಭು ಕಳೆದ ಐದಾರು ವರ್ಷಗಳ ಹಿಂದೆ ಸಿಎಂಎಸ್ ಅನಾಥಾಲಯಕ್ಕೆ ತಂದು ಬಿಟ್ಟಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ. ಬಾಲಕಿ ಆರೋಗ್ಯವಾಗಿದ್ದು ಧಿಡೀರ್ ಕುಸಿದು ಬಿದ್ದು ಹೃದಯಾಘಾತವಾಗಿರುವುದು ನಮಗೆಲ್ಲರಿಗೂ ಆಘಾತವಾಗಿದೆ‌ ಎಂದು ತಿಳಿಸಿದ್ದಾರೆ.

ಮೃತದೇಶವನ್ನು ಪಟ್ಟಣದ ಶವಾಗಾರಕ್ಕೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next