Advertisement

Gundlupete: ಕೈ ತೊಳೆಯಲು ತೆರಳಿದ್ದ ಬಾಲಕ ಕೃಷಿ ಹೊಂಡಕ್ಕೆ ಬಿದ್ದು ಸಾವು!

09:46 PM Aug 31, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಶನೇಶ್ಚರ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿದ ನಂತರ ಕೈ ಶುಚಿಗೊಳಿಸಲು ತೆರಳಿದ್ದ ಬಾಲಕನೊಬ್ಬ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.

Advertisement

ಬನ್ನಿತಾಳಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೂರ್ಯ(9) ಮೃತ ಬಾಲಕ. ವಿದ್ಯಾರ್ಥಿಯು ಶನಿವಾರ ಬೆಳಗಿನ ತರಗತಿ ಮುಗಿದ ಬಳಿಕ ಗ್ರಾಮದ ಹೊರ ವಲಯದ ಶನೇಶ್ಚರ  ದೇವಸ್ಥಾನದಲ್ಲಿ ನಡೆಯುತ್ತಿದ್ದ ಆರಾಧನೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದ್ದಾನೆ. ನಂತರ ಪಕ್ಕದ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಕೈ ತೊಳೆಯಲು ಸಹಪಾಠಿಗಳೊಡನೆ ತೆರಳಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ.

ಈ ಸಂದರ್ಭ ಸ್ಥಳದಲ್ಲಿ ಮಕ್ಕಳ ಹೊರತು ಬೇರೆ ಯಾರು ಇಲ್ಲದ್ದರಿಂದ ಉಳಿದ ಮಕ್ಕಳು ಓಡಿ ಹೋಗಿ ದೇವಾಲಯದ ಬಳಿ ವಿಷಯ ಮುಟ್ಟಿಸಿದ್ದಾರೆ. ಅಲ್ಲಿದ್ದವರು ಓಡಿ ಬಂದು ನೋಡುವಷ್ಟರಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದ. ನಂತರ ಮೃತದೇಹವನ್ನು ಹೊರ ತೆಗೆದು ಅಂತ್ಯ ಸಂಸ್ಕಾರ ನೆರವೇರಿಸಲಾಯಿತು ಎಂದು ಗ್ರಾಮಸ್ಥರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next