Advertisement

Gundlupete; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣು!

05:38 PM Sep 16, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಮನನೊಂದು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ತೊಂಡವಾಡಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಶನಿವಾರ ನಡೆದಿದೆ.

Advertisement

ತಾಲೂಕಿನ ತೊಂಡವಾಡಿ ಗ್ರಾಮದ ಹೇಮರಾಜು(28) ಮೃತ ಯುವಕ. ಈತ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವನ್ನು ಸ್ಥಳೀಯರು ಬೇಗೂರು ಪೊಲೀಸರಿಗೆ ತಿಳಿಸಿದ ಕೂಡಲೇ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಬೇಗೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಮೃತ ಹೇಮರಾಜು ತೊಂಡವಾಡಿ ಗ್ರಾಮದ ಸಮೀಪವಿರುವ ಗ್ರೀನ್ ಪ್ರೋ ಕಂಪನಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದು, ಕೆಲಸ ನಿರ್ವಹಿಸುವ ವೇಳೆ ಬಲಗೈ ಬೆರಳು ತುಂಡಾಗಿತ್ತು. ನಂತರ ಕಂಪನಿಯವರು ಖಾಯಂ ನೌಕರಿ ನೀಡುವುದಾಗಿ ಒಪ್ಪಿಕೊಂಡಿದ್ದರು. ಕೆಲ ತಿಂಗಳು ಕಳೆದರು ಖಾಯಂ ನೌಕರಿ ನೀಡದ ಹಿನ್ನಲೆ ಬೇಸತ್ತ ಹೇಮರಾಜು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ಹೇಮರಾಜು ಅಣ್ಣ ಪ್ರಸಾದ್ ದೂರು ನೀಡಿದ್ದಾರೆ. ದೂರಿನನ್ವಯ ಗ್ರೀನ್ ಪ್ರೋ ಕಂಪನಿಯ ಹೆಚ್.ಆರ್. ರತೀಶ್, ಜೋಷಿಬಲ್, ರಾಧಾಕೃಷ್ಣನ್ ಎಂಬ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ದೂರು ದಾಖಲಿಸಿಕೊಂಡ ಬೇಗೂರು ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next