Advertisement

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

08:01 PM Jul 06, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಬೈಕ್ ಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.

Advertisement

ತಾಲೂಕಿನ ಸೋಮಹಳ್ಳಿ ಗ್ರಾಮದ ನಾಗೇಂದ್ರ(45) ಹಾಗೂ ಮಹದೇವಸ್ವಾಮಿ(48) ಮೃತ ದುರ್ದೈವಿಗಳು‌. ಇವರು ಬೇಗೂರು ಹೊರ ವಲಯದ ಪೆಟ್ರೋಲ್ ಬಂಕ್ ವೊಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಸೋಮಹಳ್ಳಿ ಗ್ರಾಮಕ್ಕೆ ತೆರಳುವ ವೇಳೆ ಗುಂಡ್ಲುಪೇಟೆ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ನಾಗೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹದೇವಸ್ವಾಮಿ ಎಂಬುವವರನ್ನು ಆಂಬುಲೆನ್ಸ್ ಮೂಲಕ ಮೈಸೂರಿಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಬೇಗೂರು ಠಾಣೆ ಪೊಲೀಸರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದ ದೃಶ್ಯ ಪೆಟ್ರೋಲ್ ಬಂಕ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕಾರಿನ ನಂಬರ್ ಆಧರಿಸಿ ಪೊಲೀಸರು ಪರಾರಿಯಾದ ವಾಹನ ಪತ್ತೆಗೆ ಮುಂದಾಗಿದ್ದಾರೆ. ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

***

ಕಾರು ಪಲ್ಟಿ: ಐವರಿಗೆ ಗಾಯ
ಗುಂಡ್ಲುಪೇಟೆ: ಚಾಲಕನ ನಿಯಂತ್ರಣ ತಪ್ಪಿ ತಮಿಳುನಾಡು ಮೂಲದ ಕಾರೊಂದು ಪಲ್ಟಿಯಾಗಿರುವ ಘಟನೆ ತಾಲೂಕಿನ ಬೇಗೂರು ಹೊರ ವಲಯದ ತ್ರಿಪುರ ಸುಂದರಿ ಕಲ್ಯಾಣ ಮಂಟಪದ ಬಳಿಯಲ್ಲಿ ನಡೆದಿದೆ.

Advertisement

ತಮಿಳುನಾಡು ನೋಂದಣಿಯ ಕಾರು ಮೈಸೂರು ಕಡೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ಐದು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಾಹಿತಿ ಅರಿತ ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Advertisement

Udayavani is now on Telegram. Click here to join our channel and stay updated with the latest news.

Next