Advertisement

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ: ರೈತನಿಗೆ ಗಂಭೀರ ಗಾಯ

05:53 PM Jan 02, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ರೈತರೊಬ್ಬರ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಪರಿಣಾಮ ರೈತನಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಬೆಟ್ಟದಮಾದಹಳ್ಳಿ ಗ್ರಾಮದ ರೈತರ ಜಮೀನೊಂದರಲ್ಲಿ ನಡೆದಿದೆ.

Advertisement

ಬೆಟ್ಟದಮಾದಹಳ್ಳಿ ಗ್ರಾಮದ ರೈತ ದೇವರಾಜಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಘಟನೆಯಿಂದ ರೈತನ ಬೆನ್ನಿಗೆ ತೀವ್ರತರವಾದ ಗಾಯಗಳಾಗಿದೆ ಎನ್ನಲಾಗುತ್ತಿದ್ದು, ಗಾಯಾಳುವನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆನೆಯು ಬೆಟ್ಟದಮಾದಹಳ್ಳಿ ವ್ಯಾಪ್ತಿಯ ರೈತರ ಜಮೀನಿನ ಬಾಳೆ ಬೆಳೆ, ಹುರುಳಿ ಸೇರಿದಂತೆ ಇನ್ನಿತರ ಕಡೆ ಲಗ್ಗೆಯಿಟ್ಟಿದ್ದು, ಹಲವು ಜಮೀನುಗಳಲ್ಲಿ ಅಳವಡಿಕೆ ಮಾಡಿದ್ದ ತಂತಿ ಬೇಲಿಯನ್ನು ತುಳಿದು ಹಾಕಿದೆ ಎನ್ನಲಾಗಿದೆ. ಒಂಟಿ ಸಲಗ ಬಾಳೆ ತೋಟದಲ್ಲಿ ಬೀಡು ಬಿಟ್ಟ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: ಪಣಜಿ: ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರಕ್ಕೆ ಗೋವಾ ಸರಕಾರ ಒತ್ತಾಯ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next